ತಿಪಟೂರು :
ತಾಲ್ಲೂಕಿನ ಕಸಬಾ ಹೋಬಳಿ ಮತ್ತಿಹಳ್ಳಿ ಗ್ರಾಮದ ಕರೆ ಹಿಂಬಾಗದ ತೋಟಗಳಿಗೆ ಬೆಂಕಿ ಅವಘಡ ಸಂಭವಿಸಿದ್ದು ಅಪಾರ ಗಿಡಮರಗಳು ಅಗ್ನಿಗೆ ಆಹುತಿಯಾಗಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಕಸಬಾ ಹೋಬಳಿ ಮತ್ತಿಹಳ್ಳಿ ಗ್ರಾಮದ ಕೆರೆಯ ಹಿಂಭಾಗದ ತೋಟಗಳಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ತೆಂಗಿನ, ಟಡಕೆ ಮತ್ತು ತರಕಾರಿ ಬೆಳಗಳ ಜೊತೆಗೆ ಗಿಡಮರಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಗ್ರಾಮಸ್ಥರಾದ ಮಹೇಶ್, ಚನ್ನಪ್ಪಗೌಡ, ಸದಾಶಿವಮೂರ್ತಿ, ಓಂಕಾರ್, ನಿಂಗಪ್ಪ, ಹರೀಶ್ ಎಂಬುವರಿಗೆ ಸೇರಿದ ತೋಟಗಳು ಬೆಂಕಿಗೆ ಆಹುತಿಯಾಗಿದ್ದು ಸುಮಾರು 20 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಪ್ರಕರಣ ಹೊನವಳ್ಳಿ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/03/28-TPR-1.gif)