ಬೆಂಗಳೂರು
ಹಿಂದಿನ ಬಿಡಿಎ ಆಯುಕ್ತರಾಗಿದ್ದ ಶ್ಯಾಮ್ ಭಟ್ ವಿರುದ್ಧ ಜೆಡಿಎಸ್ನಿಂದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ದಾಖಲಾಗಿದೆ . ಸಾರ್ವಜನಿಕರು ಹಾಗೂ ರೈತರಿಗೆ ಸೈಟ್ ವಿತರಣೆ ಮಾಡುವ ಸಂದರ್ಭದಲ್ಲಿ ಒಂದು ಸೈಟ್ಗೆ 1.50ಲಕ್ಷದಿಂದ 2ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ.ಹೀಗೆ ಸುಮಾರು 100 ಸೈಟ್ಗಳಿಗೆ ಸುಮಾರು 2 ಕೋಟಿ ರೂ ಲಂಚ ಆಪೇಕ್ಷಿಸಿದ್ದರು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೊ.ಸಿ.ಎಸ್.ಸಿದ್ದರಾಜು ಆರೋಪಿಸಿದ್ದಾರೆ. ಈ ಕುರಿತು ಎಸಿಬಿಗೆ ದೂರು ದಾಖಲಿಸಿದ್ದಾರೆ. ಲಂಚ ಆಪೇಕ್ಷಿಸಿದ್ದರು ಎನ್ನಲಾದ ವಿಡಿಯೋ ಒಂದನ್ನು ಸಿದ್ಧರಾಜು ನೀಡಿದ್ದಾರೆ.ಇದೀಗ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಶ್ಯಾಮ್ ಭಟ್, ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ