ಬೆಂಗಳೂರು :
ಕೊರೊನಾ ಸಂಕಷ್ಟದ ನಡುವೆಯೇ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ವಿರುದ್ಧ ಬೆಂಗಳೂರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜನಾಧಿಕಾರ ಸಂಘರ್ಷ ಪರಿಷತ್ ಅಧ್ಯಕ್ಷ ಆದರ್ಶ್ ಅಯ್ಯರ್ ಅವರು. ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರಿನಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಲವಂತವಾಗಿ ಪರೀಕ್ಷೆಗಳನ್ನು ನಡೆಸಿ ಮಕ್ಕಳನ್ನು ಅಪಾಯಕ್ಕೆ ತಳ್ಳುತ್ತಿದ್ದಾರೆಂದು ಆರೋಪಿಸಲಾಗಿದೆ.
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿನಿಂದ ಮರಣದ ಸಂಖ್ಯೆಯು ಏರಿಕೆಯಾಗುತ್ತಿದೆ. ಈ ನಡುವೆಯೂ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದು ಲಕ್ಷಾಂತರ ವಿದ್ಯಾರ್ಥಿಗಳ ಜೀವಗಳೊಂದಿಗೆ ಆಟವಾಡಿದಂತೆ. ಹೀಗಾಗಿ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 107, 304 ಪ್ರಕರಣ ದಾಖಲಿಸಿಕೊಳ್ಳುವಂತೆ ಹಲಸೂರು ಗೇಟ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/03/allwyn_210320_suresh1.gif)