ಸಿಎಂ ಕುಮಾರಸ್ವಾಮಿ ವಿರುದ್ಧ ಖಾಸಗಿ ದೂರು ದಾಖಲು…!!!

ಬೆಂಗಳೂರು

      ಎರಡನೇ ವಿವಾಹವನ್ನು ಮುಚ್ಚಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

     ವಿಶ್ವ ಕನ್ನಡ ಸಮಾಜ ಎಂಬ ಸಂಘಟನೆಯ ಎಸ್. ಆನಂದ್ ಈ ದೂರು ದಾಖಲಿಸಿದ್ದು, ಕುಮಾರಸ್ವಾಮಿ ಅವರು ಕಾನೂನುಬಾಹಿರವಾಗಿ ಎರಡನೇ ವಿವಾಹವಾಗಿದಲ್ಲದೆ, ಪತ್ನಿ ಹಾಗೂ ಮಗಳ ವಿಷಯವನ್ನು ಗೌಪ್ಯವಾಗಿಟ್ಟಿದ್ದಾರೆ. ಇದು ಜನಪ್ರತಿನಿಧಿಗಳ ಕಾಯ್ದೆಯ ಉಲ್ಲಂಘನೆ ಎಂದು ಆರೋಪಿಸಿದ್ದಾರೆ.

      ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ, ವಿಚಾರಣೆಯನ್ನು ಏ.22ಕ್ಕೆ ಮುಂದೂಡಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap