ದಾವಣಗೆರೆ:

ವೈದ್ಯ ವಿದ್ಯಾರ್ಥಿಯೊಬ್ಬರಲ್ಲಿ ಕೊರೊನಾ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಇಲ್ಲಿನ ನಿಜಲಿಂಗಪ್ಪ ಬಡಾವಣೆಯಲ್ಲಿರುವ ರೋಗಿ-63ರ ವಾಸದ ಮನೆಯ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ಸಂಪೂರ್ಣ ಸೀಲ್ಡೌನ್ ಮಾಡಿದ್ದು, ಈ ಪ್ರದೇಶದ ಎಲ್ಲಾ ಪ್ರವೇಶ ದ್ವಾರಗಳನ್ನು ಶಾಶ್ವತವಾಗಿ ತೆಡೆಗೋಡೆ ಹಾಕುವ ಮೂಲಕ ನಾಕಾಬಂಧಿ ಮಾಡುವ ಮೂಲಕ ಸಂಪೂರ್ಣ ಸೀಲ್ ಆಗುವಂತೆ ನೋಡಿಕೊಳ್ಳಬೇಕೆಂದು ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ನಿಜಲಿಂಗಪ್ಪ ಲೇಔಟ್ ಕೊವೀಡ್-19 ಸೋಂಕಿತ ವ್ಯಕ್ತಿಯ ಮನೆಯ ಸುತ್ತ ಮುತ್ತಲಿನ 100 ಮೀಟರ್ ಪ್ರದೇಶವನ್ನು ಈಗಾಗಲೇ ಸೀಲ್ಡೌನ್ ಮಾಡಲಾಗಿದ್ದು, ಅದನ್ನು ನಿಯಂತ್ರ್ರಿತ ಪ್ರದೇಶ ಎಂಬುದಾಗಿ ಗುರುತಿಸಿ ಉಪವಿಭಾಗಾಧಿಕಾರಿಯವರನ್ನು ಘಟಕ ನಿಯಂತ್ರಕರಾಗಿ (ಕಮಾಂಡರ್) ನಿಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಪಾಸಿಟಿವ್ ಪ್ರಕರಣ ಹೊಂದಿರುವ ಜಿಲ್ಲೆಗಳಲ್ಲಿ 28 ದಿನಗಳಲ್ಲಿ ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗದಿರುವ ಪ್ರದೇಶವನ್ನು ನಿಯಂತ್ರಿತ ಪ್ರದೇಶ ಎಂದು ಸರ್ಕಾರ ಘೋಷಣೆ ಮಾಡಿದೆ. ಈ ನಿಯಂತ್ರಿತ ವಲಯದ ಎಲ್ಲಾ ಪ್ರವೇಶ ದ್ವಾರಗಳನ್ನು ಶಾಶ್ವತವಾಗಿ ತೆಡೆಗೋಡೆ ಹಾಕುವ ಮೂಲಕ ಪೊಲೀಸ್ ನಾಕಾಬಂಧಿ ಮಾಡಬೇಕು. ನಿಯಂತ್ರಿತ ಪ್ರದೇಶದಲ್ಲಿ ಯಾವುದೇ ವ್ಯಕ್ತಿ ಯಾವುದೇ ವಿವಿಧ ಉದ್ದೇಶಗಳಿಂದ ಮನೆಯಿಂದ ಹೊರೆಗೆ ಬರಲು ಅವಕಾಶ ನೀಡಬಾರದು ಪ್ರತಿಯೊಂದು ವಲಯದಲ್ಲಿ ಒಂದೇ ಒಂದು ಪ್ರವೇಶ ಮತ್ತು ನಿರ್ಗಮನ ದ್ವಾರವಿರಬೇಕು ಎಂದು ಸೂಚನೆ ನೀಡಿದರು.
ನಿಯಂತ್ರಿತ ವಲಯದ ಒಳಗೆ ಮತ್ತು ಹೊರಗೆ ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ನೀಡಬಾರದು. ಇಡೀ ಪ್ರದೇಶವÀನ್ನು ಸಂಪೂರ್ಣವಾಗಿ ಸೀಲ್ ಆಗುವಂತೆ ನೋಡಿಕೊಳ್ಳಬೇಕು ಮತ್ತು ಅಗತ್ಯ ಸೇವೆಗಳು, ವೈದ್ಯಕೀಯ ತುರ್ತು ಸಂದರ್ಭಗಳಿಗೆ ಪೊಲೀಸ್ ಇಲಾಖೆ ಅವಶ್ಯಕತೆ ಇರುವವರಿಗೆ ಎಮರ್ಜೆನ್ಸಿ ಪಾಸ್ಗಳನ್ನು ವಿತರಿಸಬೇಕು ಹಾಗೂ ನಿಯಂತ್ರಿತ ವಲಯದಲ್ಲಿ ಸಂಪೂರ್ಣ ಲಾಕ್ಡೌನ್ ಖಾತರಿ ಪಡಿಸಲು ಡ್ರೋನ್ಗಳನ್ನು ಬಳಸಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳು ಜಂಟಿಯಾಗಿ ಮುಂಜಾಗ್ರತಾ ಕ್ರಗಳನ್ನು ಕೈಗೊಳ್ಳಬೇಕು. ನಿಯಂತ್ರಿತ ವಲಯದಲ್ಲಿ ಆರೋಗ್ಯ ಔಟ್ ಪೋಸ್ಟ್ ಆರಂಭಿಸಿ ಓರ್ವ ವ್ಯೆದ್ಯ ಹಾಗೂ ಸತತ ಐಇಸಿ ಪ್ರಚಾರದ ಜೊತೆಗೆ ದಿನಕ್ಕೆ ಎರಡು ಬಾರಿ ಜನಸಂಪರ್ಕಗಳ ಪತ್ತೆ ಕಾರ್ಯಕ್ಕೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಜನಸಂಪರ್ಕ ನಿಗಾ ಪತ್ತೆ ಕಾರ್ಯವನ್ನು ಶಿಷ್ಠಾಚಾರದ ನಿಯಮಗಳ ಪ್ರಕಾರ ನಡೆಸಬೇಕು ಹೆಚ್ಚಿನ ರಿಸ್ಕ್ ಸಂಪರ್ಕದ ವ್ಯಕ್ತಿಗಳನ್ನು ತಕ್ಷಣವೇ ಸಾಂಸ್ಥಿಕ ದಿಗ್ಬಂದನ ಕೇಂದ್ರಕ್ಕೆ ರವಾನಿಸಬೇಕು ಹಾಗೂ ಕಡಿಮೆ ಸಂಪರ್ಕದ ವ್ಯಕ್ತಿಗಳನ್ನು ಗೃಹ ದಿಗ್ಬಂದನಕ್ಕೆ ಒಳಪಡಿಸಬೇಕು. ಅಧಿಕ ಅಪಾಯ ಮತ್ತು ಕಡಿಮೆ ಅಪಾಯವಿರುವ ವ್ಯಕ್ತಿಗಳಿಂದ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು ಎಂದರು.
ಮಹಾನಗರ ಪಾಲಿಕೆಯು ನೈರ್ಮಲಿಕರಣದ ನಿರ್ವಹಣೆ ಮಾಡಬೇಕು. ಪ್ರತಿದಿನವೂ ಘನತ್ಯಾಜ್ಯ ನಿರ್ವಹಣೆ ಮತ್ತು ಸೋಂಕು ನಿವಾರಣೆ ಮಾಡುವ ಕೆಲಸವನ್ನು ನಿರ್ವಹಿಸತಕ್ಕದ್ದು ಮತ್ತು ಕುಡಿಯುವ ನೀರಿನ ಸರಬರಾಜು ಮಾಡುವ ಕೆಲಸವನ್ನು ಮಾಡಬೇಕು ಅಗತ್ಯವಿರುವವರಿಗೆ ಆಹಾರ ಪೊಟ್ಟಣಗಳು ಮತ್ತು ಪಡಿತರವನ್ನು ಒದಗಿಸುವುದು ಮತ್ತು ಕಾರ್ಯನಿರ್ವಹಿಸಲು ಸರ್ಕಾರಿ ಗುರುತಿನ ಪತ್ರಗಳನ್ನು ಸಿಬ್ಬಂದಿಗೆ ನೀಡಬೇಕು. ಇವರನ್ನು ಹೊರತು ಪಡಿಸಿ ಬೇರೆಯವರಿಗೆ ಪ್ರವೇಶವನ್ನು ನಿರ್ಭಂದಿಸಬೇಕು ಎಂದು ಸೂಚಿಸಿದರು.
ನಿಯಂತ್ರಿತ ವಲಯವನ್ನು ಸಂಪೂರ್ಣ ಸೀಲ್ ಮಾಡುವುದರರಿಂದ ಜನ ಮನೆಗಳಿಂದ ಯಾವ ಕಾರಣಕ್ಕೂ ಹೊರಗೆ ಬರುವಂತಿಲ್ಲ ಹಾಗೂ ಜನರಿಗೆ ಅಗತ್ಯ ವಸ್ತು ದಿನಸಿ ಪದಾರ್ಥಗಳು, ಮಾಂಸ, ಹಾಲು, ಎಲ್.ಪಿ.ಜಿ. ಅನಿಲ, ಔಷಧಿಗಳನ್ನು ಪೂರೈಸುವವರಿಗೆ ಪಾಸ್ ಕೊಡಬೇಕು ಅಗತ್ಯ ಸೇವೆಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನಿಗಾವಹಿಸಬೇಕು ಮತ್ತು ಪಡಿತರ ಚೀಟಿ ಹೊಂದಿರುವವರಿಗೆ ನ್ಯಾಂiÀiಬೆಲೆ ಅಂಗಡಿಗಳು ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುವವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ನಗರ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರದ ವೈದ್ಯರಾದ ಡಾ.ವೆಂಕಟೇಶ್, ಡಾ.ನಾಗರಾಜ್, ಡಾ. ಸುಧೀಂದ್ರ ಮಹಾನಗರ ಪಾಲಿಕೆ ಆರೋಗ್ಯ ನೀಕ್ಷಕರಾದ ರಾಜಪ್ಪ, ಮದುಶ್ರೀ, ಬಡಾವಣೆ ಪೊಲೀಸ್ ಠಾಣೆ ಎ.ಎಸ್.ಐ ಮಂಜುನಾಥ ಸ್ವಾಮಿ, ಕಂದಾಯ ಇಲಾಖೆ ಸಿಬ್ಬಂದಿ ಮಂಜುನಾಥ ಡಿ, ಅಂಜನಪ್ಪ, ಉಪೇಂದ್ರ ಹಾಜರಿದ್ದರು.








