ದಾವಣಗೆರೆ :
ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವಧಿಯಲ್ಲಿ ಗೊಲ್ಲ ಸಮಾಜ ಸೇರಿದಂತೆ ಎಲ್ಲಾ ಹಿಂದುಳಿದ ಸಮುದಾಯಗಳಿಗೆ ಸಾಕಷ್ಟು ಕೊಡುಗೆ ನೀಡಿದ್ದು, ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೊಲ್ಲ ಸಮಾಜ ಬೆಂಬಲಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಜಯಮ್ಮ ಬಾಲರಾಜ್ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಆದ್ದರಿಂದ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಗೊಲ್ಲ ಬಾಂಧವರು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಬಿ.ಮಂಜಪ್ಪನವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಹಿಂದಿನ ಕಾಂಗ್ರೆಸ್ ಸರಕಾರ ಕೃಷ್ಣ ಜಯಂತಿ ಆಚರಣೆ, ದೇವರಾಜ್ ಅರಸ್ ನಿಗಮಕ್ಕೆ 100 ಕೋಟಿ ಅನುದಾನ ನೀಡಿದ್ದರು. ಗೊಲ್ಲ ಸಮುದಾಯವನ್ನು ಜಾತಿ ಪಟ್ಟಿ ಹೆಸರಲ್ಲಿ ಸೇರುವಂತೆ ಮಾಡಿದ್ದಾರೆ. ಅಲ್ಲದೇ ವಿದ್ಯಾಸಿರಿ, ಅನ್ನಭಾಗ್ಯ ಸೇರಿದಂತೆ ಸಾಕಷ್ಟು ಜನಪರ ಯೋಜನೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲಿ ಗೊಲ್ಲ ಸಮುದಾಯದ ಎಲ್ಲಾ ಜನರು ಬೆಂಬಲಿಸಬೇಕೆಂದು ಸಲಹೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶಿವು ಯಾದವ್, ನಿಜಲಿಂಗಪ್ಪ, ಗಂಗಾಧರಪ್ಪ, ಸಂಪತ್ಕುಮಾರ್, ಬಾಲರಾಜ್, ಎಚ್.ಹನುಮಂತಪ್ಪ, ವೀರಣ್ಣ, ವೆಂಕಟೇಶ್ ಗುಡಾಳ್, ವೀರೇಶ್ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/20_dvg_05_2.gif)