ಹಿರಿಯೂರು :
ನಗರದ ಮಾಜಿ ಸಚಿವರಾದ ಡಿ.ಸುಧಾಕರ್ರವರ ಕಛೇರಿಯಲ್ಲಿ ತಾಲ್ಲೂಕು ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಧುಮಲೀಗೌಡ ನೆರವೇರಿಸಿ ಮಾತನಾಡಿ, ಕೇಂದ್ರದ ಭ್ರಷ್ಟ ಬಿಜೆಪಿ ಪ್ರಧಾನಮಂತ್ರಿಗಳಾದ ನರೇಂದ್ರಮೋದಿಯವರ ಆಡಳಿತದಲ್ಲಿ ದೇಶದ ಆರ್ಥಿಕ ದೀವಳಿತನವನ್ನು ತಾಲ್ಲೂಕಿನ ಜನತೆಗೆ ತಿಳಿಸಬೇಕು.ಡೀಸಲ್ ಪೆಟ್ರೋಲ್ ಗ್ಯಾಸ್ ಜಿಎಸ್ಟಿ ನೋಟು ಅಮಾನ್ಯೀಕರಣದಿಂದಾದ ಸಾರ್ವಜನಿಕರಿಗೆ ಆದ ತೊಂದರೆಯನ್ನು ಪ್ರಚಾರಪಡಿಸಬೇಕೆಂದು ತಿಳಿಸಿದರು.
ಹಿರಿಯೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ರವರು ಮಾತನಾಡಿ, ಯುವ ಕಾಂಗ್ರೆಸ್ನ ಎಲ್ಲಾ ಕಾರ್ಯಕ್ರಮಗಳಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಹಕಾರ ನೀಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ನ ಉಪಾಧ್ಯಕ್ಷರಾದ ಕಾರಂಹಳ್ಳಿ ಉಲ್ಲಾಸ್ರವರು ಮಾತನಾಡಿ, 2019ರ ಮಹಾಸಭೆ ಚುನಾವಣೆಗೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮನೆಮನೆಗೆ ತೆರಳಿ ಕೇಂದ್ರದಲ್ಲಿ ಆಡಳಿತ ನಡೆಸಿದಂತೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಹಾಗೂ ನರೇಂದ್ರ ಮೋದಿ ಎನ್.ಡಿಎ ಸರ್ಕಾರದ ವೈಫಲ್ಯಗಳನ್ನು ತಿಳಿಸಬೇಕೆಂದರು.
ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ರಫೀಕ್ ಅಹ್ಮದ್ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಜಿ.ದಾದಾಪೀರ್, ಜಿಲ್ಲಾ ಉಪಾಧ್ಯಕ್ಷರಾದ ಕರಿಯಪ್ಪ, ಉಪನ್ಯಾಸಕರಾದ ಸಿಗ್ಬತ್ವುಲ್ಲಾ ಷರೀಫ್, ಪ್ರಧಾನ ಕಾರ್ಯದರ್ಶಿ ಶಾಹಿದ್, ಶಶಾಂಕ್ ಎಸ್ಸಿ ಘಟಕದ ಉಪಾಧ್ಯಕ್ಷರಾದ ಜ್ಯಾನೇಶ್, ಶಿವು, ಹರ್ಷ, ಆಜಾಂ, ಎಸ್.ಟಿ ಸಾಲ್ತಾ, ಅಧ್ಯಕ್ಷ ಗಿರೀಶ್, ನರಸಿಂಹಮೂರ್ತಿ, ಹಲವಾರು ಮುಖಂಡರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
