ಬೆಂಗಳೂರು
ಹೊಸಕೋಟೆಯಲ್ಲಿ ಬಿಜೆಪಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಲ್ಲದೆ, ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಅವರು ಮತದಾರರಿಗೆ ಚಿನ್ನಾಭರಣ ನೀಡಿ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.ನಗರದಲ್ಲಿಂದು ಶೇಷಾದ್ರಿ ರಸ್ತೆಯ ರಾಜ್ಯ ಮುಖ್ಯ ಚುನಾವಣೆ ಆಯೋಗ ಕಚೇರಿಗೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ, ದೂರು ಸಲ್ಲಿಸಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ರಾಥೋಡ್, ಹೊಸಕೋಟೆ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಅವರು ಬಿಜೆಪಿ ಚಿಹ್ನೆ ಯುಳ್ಳ ಚಿನ್ನಾಭರಣ ಹಂಚಿಕೆ ಮಾಡಿದ್ದಾರೆ. ಇದರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ ಎಂದರು.
ಈ ಹಿನ್ನೆಲೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರೋ ಎಂಟಿಬಿ ನಾಗರಾಜ್ ವಿರುದ್ಧ ಎರಡು ದೂರುಗಳ ದಾಖಲಾಗಿದ್ದು, ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ತುರ್ತಾಗಿ ದೂರು ದಾಖಲಿಸಿಕೊಳ್ಳುವಂತೆ ಅವರು ಒತ್ತಾಯ ಮಾಡಿದರು.ಸಿಂಗ್ ವಿರುದ್ಧ ದೂರು: ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ತನ್ನ ಪುತ್ರನ ಮದುವೆಗೆ 50 ಸಾವಿರ ಜನರಿಗೆ ಆಮಂತ್ರಣ ನೆಪದಲ್ಲಿ ಊಟ,ತಿಂಡಿ ಮತ್ತು ಉಡುಗೊರೆ ನೀಡಿ, ಮತದಾರರ ಮೇಲೆ ಪ್ರಭಾವ ಬೀರಿದ್ದು, ಈ ಇಬ್ಬರ ಮೇಲೂ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಕ್ತಾರ ನಿಜಾಮ್ ಫೌಜಾದರ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/09/mtbnagraj-1554893463.gif)