ತ್ಯಾಗ, ಬಲಿದಾನದ ಮೂಲಕ ಕಾಂಗ್ರೆಸ್ ಪಕ್ಷ ಸ್ಥಾಪನೆಯಾಗಿದೆ.

ಹೊಸಪೇಟೆ :

        ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 132ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶುಕ್ರವಾರ ನಗರದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಥ ಸಂಚಲನ ನಡೆಸಿದರು.

       ಇಲ್ಲಿನ ಗಾಂಧಿ ಚೌಕ್ ಬಳಿ ಇರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪಥ ಸಂಚಲನಕ್ಕೆ ಚಾಲನೆ ನೀಡಲಾಯಿತು. ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೊನೆಗೆ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

        ಬಳಿಕ ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಕಲ್ಲುಕಂಬ ಪಂಪಾಪತಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಕಾಂಗ್ರೆಸ್ ಮಹನೀಯರು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವು ತ್ಯಾಗ, ಬಲಿದಾನದ ಮೂಲಕ ಕಟ್ಟಿದಂತಹ ಪಕ್ಷವಾಗಿದೆ ಎಂದರು.

      ಕಾಂಗ್ರೆಸ್ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಬಿ.ವಿ.ಶಿವಯೋಗಿ ಮಾತನಾಡಿ, ಸಾಮಾಜಿಕ ನ್ಯಾಯದಡಿ ಸ್ಥಾಪಿತವಾಗಿರುವ ಕಾಂಗ್ರೆಸ್ ಪಕ್ಷವು ಇಂದಿಗೂ ದಲಿತರು, ಹಿಂದುಳಿದವರು, ಅಲ್ಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಹಿತ ಕಾಯುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

         ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಟಿಂಕರ್ ರಫೀಕ್, ಅಮಾಜಿ ಹೇಮಣ್ಣ, ಕವಿತಾಸಿಂಗ್, ಸಂದೀಪಸಿಂಗ್, ಫಯಿಂಭಾಷಾ, ವೀರಸ್ವಾಮಿ, ನಿಂಬಗಲ್ ರಾಮಕೃಷ್ಣ, ಸಿ.ಕೃಷ್ಣ, ಗುಜ್ಜಲ ಉಮೇಶ, ಎಚ್.ಎಲ್.ಕೊಟ್ರೇಶ, ಜೀವರತ್ನ, ಬಂಡೆ ರಮೇಶ, ಎನ್.ವೆಂಕಟೇಶ್, ತಿಮ್ಮಪ್ಪ ಯಾದವ್, ಲಿಯಾಕತ್ ಅಲಿ, ಮಧುರ ಚೆನ್ನಶಾಸ್ತ್ರಿ ಇದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link