ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಡಿ.ಸುಧಾಕರ್

ಚಿತ್ರದುರ್ಗ;

   ಹಿರಿಯೂರಿನ ಪುರಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ದಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮಾಜಿ ಶಾಸಕ ಡಿ.ಸುಧಾಕರ್ ಅವರ ನೇತೃತ್ವದಲ್ಲಿ ಮುಖಂಡರುಗಳು ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರುಪುರಸಭೆ ವ್ಯಾಪ್ತಿಯ ವಿವಿಧ ಬಡಾವಣೆ ಮತ್ತು ವಾರ್ಡ್‍ಗಳಲ್ಲಿ ಡಿ.ಸುಧಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಎ.ಜಾಕೀರ್ ಹುಸೇನ್ ಹಾಗೂ ಇನ್ನಿತರೆ ಮುಖಂಡರುಗಳು ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು

      ಹಿರಿಯೂರಿನಲ್ಲಿ ಕುಡಿಯುವ ನೀರು, ರಸ್ತೆ, ಮೂಲಭೂತ ಸೌಕರ್ಯಗಳು ಸೇರಿದಂತೆ ಪಟ್ಟಣದ ಸಮಗ್ರ ಅಭಿವೃದ್ದಿಯ ದೃಷ್ಠಿಯಿಂದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಆಯ್ಕೆ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು ನಂತರ ನಡೆದ ಸಭೆಯಲ್ಲಿ ಮಾತನಾಡಿದ ಡಿ.ಸುಧಾಕರ್, ಹಿರಿಯೂರು ಪಟ್ಟಣವೂ ಸೇರಿದಂತೆ ಇಡೀ ತಾಲ್ಲೂಕಿನ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡಿದ್ದರೂ ಕಳೆದ ಚುನಾವಣೆಯಲ್ಲಿ ಸೋತಿದ್ದೇನೆ. ಅದಕ್ಕೆ ನಾನಾ ಕಾರಣಗಳಿರಬಹುದು. ಆದರೆ ಈ ಚುನಾವಣೆಯಲ್ಲಿ ಜನರು ಅಭಿವೃದ್ದಿಯ ದೃಷ್ಟಿಯಿಂದ ಕಾಂಗ್ರೆಸ್‍ಗೆ ಬೆಂಬಲ ನೀಡುವರೆಂಬ ವಿಶ್ವಾಸವಿದೆ ಎಂದರು

     ಹಿರಿಯೂರಿನಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ರಸ್ತೆ, ಕುಡಿಯುವ ನೀರು ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅನುದಾನದಲ್ಲಿ ಕೋಟ್ಯಾಂತರ ರೂಪಾಯಿಗಳ ವೆಚ್ಚದಲ್ಲಿ ಅಭಿವೃದ್ದಿ ಕಾಮಗಾರಿಗಳು ನನ್ನ ಅವಧಿಯಲ್ಲಿ ನಡೆದಿವೆ. ಮುಂದಿನ ದಿನಗಳಲ್ಲಿಯೂ ಪಟ್ಟಣದ ಅಭಿವೃದ್ದಿಗೆ ಶ್ರಮಿಸುವುದಾಗಿಯೂ ಭರವಸೆ ನೀಡಿದರು

      ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಎ.ಜಾಕೀರ್ ಹುಸೇನ್ ಮಾತನಾಡಿ, ಹಿರಿಯೂರು ತಾಲ್ಲೂಕು ಕಳೆದ ಹತ್ತು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ದಿ ಕಂಡಿದೆ. ಸುಧಾಕರ್ ಅವರ ಕೊಡುಗೆ ಈ ತಾಲ್ಲೂಕಿಗೆ ಮಹತ್ವದ್ದು. ಇದನ್ನು ಯಾರು ಸಹ ಮರೆಯಲಾಗದು ಎಂದರು

      ಪುರಸಭೆಯ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‍ಗೆ ಬೆಂಬಲ ನೀಡಬೇಕು. ಈ ದೇಶದ ಅಭಿವೃದ್ದಿ ಕಾಂಗ್ರೆಸ್‍ನಿಂದ ಮಾತ್ರ ಸಾದ್ಯ. ಕಾಂಗ್ರೆಸ್ ದೇಶವನ್ನು ಕಟ್ಟಿದ ಪಕ್ಷ. ಸೋಲು ಗೆಲುವು ಸಹಜ. ಲೋಕಸಭೆ ಚುನಾವಣೆಯಲ್ಲಿ ಸೋತಿರಬಹುದು. ಇದರಿಂದ ಯಾರೂ ದೃತಿಗೆಡಬೇಕಿಲ್ಲ.

        ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಜಾಕೀರ್ ಹುಸೇನ್ ಹೇಳಿದರು
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಚರಿತ್ರೆಯೇ ಇದೆ. ಇದು ಕೇವಲ ಅಧಿಕಾರಕ್ಕಾಗಿ ಹುಟ್ಟಿಕೊಂಡ ಪಕ್ಷವಲ್ಲ. ದೇಶವನ್ನು ಕಟ್ಟುವ ಸಲುವಾಗಿಯೇ ಹುಟ್ಟಿದ ಪಕ್ಷ. ಕಳೆದ 70 ವರ್ಷಗಳಲ್ಲಿ ಈ ದೇಶವನ್ನು ಕಟ್ಟಿದ ಕಾಂಗ್ರೆಸ್ ಹಲವು ಬಾರಿ ಸೋತಿದೆ. ಮತ್ತೆ ಗೆದ್ದಿದೆ. ಸೋಲು ಶಾಶ್ವತವಲ್ಲ ಎಂದರು ಪುರಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಹೆಚ್ಚಿನ ಬೆಂಬಲ ಸಿಗಬೇಕು. ಇಲ್ಲಿ ಕಾಂಗ್ರೆಸ್‍ಗೆ ಅಧಿಕಾರ ಸಿಕ್ಕರೆ ಮಾತ್ರ ಅಭಿವೃದ್ದಿ ಸಾಧ್ಯವೆಂದರು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link