ಹೊಸಪೇಟೆ:
ಮತದಾನ ಬಹಿಷ್ಕರಿಸಿ ಮತಗಟ್ಟೆ ಬಳಿ ಪ್ರತಿಭಟನೆ ಮಾಡುತ್ತಿದ್ದ ಜನರ ಜೊತೆ ಮಾತನಾಡಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಚುನಾವಣೆ ಅಧಿಕಾರಿಗಳ ಮುಂದೆ ಗುರುವಾರ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.
ತಹಶೀಲ್ದಾರ್ ಡಿ.ಜೆ.ಹೆಗಡೆ ಅವರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ ನಿಂಬಗಲ್ ರಾಮಕೃಷ್ಣ ಹಾಗೂ ಆಜಾದ್, ಮತದಾರರ ಜತೆ ಮಾತನಾಡಲು ಬಿಟ್ಟಿರುವುದು ತಪ್ಪು. ನೀವು ಬಿಜೆಪಿ ಏಜೆಂಟ್ರಂತೆ ವರ್ತಿಸುತ್ತಿದ್ದೀರಾ ಎಂದು ಪ್ರಶ್ನಿಸಿದರು. ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವ ಭರವಸೆ ಕೊಡುತ್ತಿದ್ದಾರೆ, ಅದನ್ನು ತಡೆಯುವ ಬದಲು ತಹಶೀಲ್ದಾರ್ ಡಿ.ಜೆ.ಹೆಗಡೆ ದೂರದಲ್ಲಿ ನಿಂತು ನೋಡುತ್ತಿದ್ದಾರೆ ಎಂದು ಆರೋಪಿಸಿದರು.
ಚುನಾವಣಾ ಅಧಿಕಾರಿಗಳು ಬಂದು ಮಾತುಕತೆ ನಡೆಸಬೇಕು. ಯಾವ ಪಕ್ಷದ ಅಭ್ಯರ್ಥಿಯೂ ಬರಬಾರದು. ಇದು ನೇರಾನೇರ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
