ಸವಣೂರ
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.ನ್ಯಾಯಾಧೀಶರಾದ ಬಾಳಾಸಾಹೇಬ ಅಡೆವಡೆಯವರ ಕಾರ್ಯಕ್ರಮ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಎಲ್ಲ ವರ್ಗದ ಜನರ ಸರ್ವಾಂಗಿಣ ಅಭಿವೃದ್ಧಿಗಾಗಿ ಡಾ|| ಬಿ ಆರ್ ಅಂಬೇಡ್ಕರ್ ಹಾಗೂ ಅವರ ತಂಡದವರ ಶ್ರಮದ ಫಲವಾಗಿ ಪ್ರಪಂಚದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ಸಂವಿಧಾನ ಜಾರಿಗೆ ಬಂದಿದೆ.
ಜನರಿಗೆ ಸಂವಿಧಾನದ ಬಗ್ಗೆ ಹೆಚ್ಚಿನ ತಿಳುವಳಿಕೆ ಹಾಗೂ ಪ್ರಜ್ಞಾ ಮನೋಭಾವನೆಯನ್ನು ಬೆಳಸಬೇಕಾಗಿದೆ. ಈ ನಿಟ್ಟಿನಲ್ಲಿ ವಕೀಲರು ಮುಂದಾಗಬೇಕು. ಸಂವಿಧಾನದ ಆಶಯಗಳನ್ನು ಇಡೇರಿಸಿದಾಗ ಸಂವಿಧಾನ ದಿನ ಆಚರಣೆಯ ಸಾರ್ಥಕವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ನ್ಯಾಯವಾದಿಗಳಾದ ಎನ್ ಎಸ್ ಪಾಟೀಲ ವಹಿಸಿದ್ದರು.ವಕೀಲರಾದ ಎಸ್ಬಿ ಭಿಷ್ಟನಗೌಡ್ರ ಉಪನ್ಯಾಸ ನೀಡುತ್ತಾ ಸಂವಿಧಾನ ಎಲ್ಲರಿಗೂ ಸಮಾನವಾಗಿ ಕಾಣುವ ಕಾನೂನುಗಳ ಸಂಗ್ರಹ. ದೇಶದ ದಿಕ್ಚೂಚಿ, ಇದರ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ಇರಬೇಕಾದದ್ದು ಅವಶ್ಯಕವಾಗಿದೆ ಎಂದರು.
ವಕೀಲರಾದ ಎಂಎಂ ಪಾಟೀಲ ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಗಳಿಗೂ ಭಾರತದ ಸಂವಿಧಾನ 6 ಮೂಲಭೂತ ಹಕ್ಕುಗಳನ್ನು ನೀಡಿದೆ. ಇವುಗಳ ಸದುಪಯೋಗದಿಂದ ಉತ್ತಮ ವ್ಯಕ್ತಿತ್ವ ಬೆಳಿಸಿಕೊಂಡು ಜೀವನ ಸಾಗಿಸಲು ಒಳ್ಳೆಯ ಬದುಕು ಕಟ್ಟಿಕೊಳುವಂತಾಗಬೇಕು ಎಂದರು. ಈ ಸಂದರ್ಭದಲ್ಲಿ ಜಿಎಂ ಮರಿಗೌಡ್ರ,ವಕೀಲ ಬಳಗದವರು ಹಾಗೂ ಕಾರ್ಯವ್ರಂದದವರು ಭಾಗಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
