ಮಂಗಳೂರು :ಮಧ್ಯಾಹ್ನ 3 ರಿಂದ 6 ಗಂಟೆವರೆಗೆ ಕರ್ಫ್ಯೂ ಸಡಿಲಿಕೆ : ಬಿ ಎಸ್ ಯಡಿಯೂರಪ್ಪ

ಮಂಗಳೂರು:

   ಮಂಗಳೂರು ನಗರದಲ್ಲಿ ಕಳೆದ ಎರಡು ದಿನದಿಂದ ಜಾರಿಗೊಳಿಸಲಾಗಿರುವ ಕರ್ಫ್ಯೂ ವನ್ನು ಬೆಳಿಗ್ಗೆ 6-8ರವರೆಗೆ ಸಡಿಲಿಸಲಾಯಿತಾದರು ಸಾರ್ವಜನಿಕರಿಗೆ ಮಾಹಿತಿ ಇಲ್ಲದ ಕಾರಣ ಗೊಂದಲಮಯವಾಗಿತ್ತು ಆದರೆ ಈ ಗೊಂದಲಗಳಿಗೆ ಎಡೆ ಮಾಡಿಕೊಡದಂತೆ ಪೊಲೀಸರೊಂದಿಗೆ ಚರ್ಚಿಸಿ ಇಂದು ಮಧ್ಯಾಹ್ನ 3ರಿಂದ ಸಂಜೆ 6ವರೆಗೆ ಸಡಿಲಿಕೆ ಮಾಡಲು ಆದೇಶ ನೀಡಲಾಗದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ಧಾರೆ.

  ಜನರ ಮನವಿಯ ಮೇರೆಗೆ ಇಂದು ಮೂರು ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಗುವುದು. ರವಿವಾರ ರಾತ್ರಿ ಮಾತ್ರ ಕರ್ಫ್ಯೂ ಜಾರಿಯಲ್ಲಿರಲಿದೆ. ಸೋಮವಾರದಿಂದ ಸಂಪೂರ್ಣ ಕರ್ಫ್ಯೂ ತೆರವು ಮಾಡಲಾಗುತ್ತದೆ ಎಂದು ಹೇಳಿದರು.ಸೋಮವಾರದಿಂದ ಮಂಗಳೂರು ನಗರದಲ್ಲಿ ಕರ್ಫ್ಯೂ ತೆರವು ಮಾಡಿದರೂ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಆದರೆ ಕ್ರಿಸ್ ಮಸ್ ಸೇರಿ ಯಾವುದೇ ಆಚರಣೆಗೆ ಅಡ್ಡಿಯಾಗುವುದಿಲ್ಲ. ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

    ಮಂಗಳೂರು ಹಿಂಸಾಚಾರ ಘಟನೆಯಿಂದ ನೋವಾಗಿದೆ ಎಂದ ಸಿಎಂ ಯಡಿಯೂರಪ್ಪ,  ಪೊಲೀಸ್ ಗುಂಡೇಟಿಗೆ ಬಲಿಯಾದವರ ಕುಟುಂಬಿಕರಿಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ಕೇರಳ ಮೂಲದ ಪತ್ರಕರ್ತರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬಿಎಸ್ ವೈ, ಕೇರಳದ ಪತ್ರಕರ್ತರು ಯಾವುದೇ ದಾಖಲೆಗಳಿಲ್ಲದೆ ಆಗಮಿಸಿದ್ದರು. ಈ ಪ್ರಕರಣದ ಕುರಿತು ಸಮರ್ಪಕ ತನಿಖೆಗೆ ಸೂಚಿಸಿದ್ದೇವೆ ಎಂದರು.

Recent Articles

spot_img

Related Stories

Share via
Copy link