ನಮ್ಮಿಬ್ಬರದ್ದು ರಾಜಕೀಯ ಮೀರಿದ ಗೆಳೆತನ: ಶ್ರೀರಾಮುಲು

ಬೆಂಗಳೂರು:

    ಉಪ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳ ಬಾಕಿ ಇರುವಾಗ ಜೆಡಿಎಸ್‌ ಪಕ್ಷಕ್ಕೆ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ಜೆಡಿಎಸ್ ನಾಯಕ ಜಿ. ಟಿ. ದೇವೇಗೌಡ ಅವರನ್ನು ಅವರ ಮೈಸೂರಿನ ವಿಜಯಬಗರದ ಮನೆಯಲ್ಲಿ ಭೇಟಿ ಮಾಡಿ ಜಿಟಿಡಿ ಅವರಿಗೆ ಶುಭ ಹಾರೈಸಿದರು.

    ಹುಣಸೂರು, ಕೆ. ಆರ್. ಪೇಟೆ ಕ್ಷೇತ್ರದ ಉಪ ಚುನಾವಣೆಗೂ ಮುನ್ನ ನಡೆದ ಈ ಭೇಟಿ ರಾಜ್ಯ ರಾಜಕೀಯದಲ್ಲಿ ಒಂದು ರೀತಿಯ ಅನುಮಾನಕ್ಕೂ ಕಾರಣವಾಗಿದೆ ಎನ್ನಲಾಗಿದೆ.ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡರ ಹುಟ್ಟುಹಬ್ಬವಿದ್ದ ಕಾರಣ ರಾಮುಲು ಅವರನ್ನು ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.

   ಮಾಜಿ ಸಚಿವ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರನ್ನು ಮೈಸೂರಿನ ಅವರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ಜನ್ಮದಿನದ ಶುಭಾಶಯ ಕೋರಿದೆ. ನಮ್ಮಿಬ್ಬರದ್ದು ರಾಜಕೀಯ ಮೀರಿದ ಗೆಳೆತನ” ಎಂದು ಶ್ರೀರಾಮುಲು ಫೇಸ್‌ ಬುಕ್‌ನಲ್ಲಿ ಬರೆದುಕೊಂಡಿದ್ದಾರೆ

  ಬಿ. ಶ್ರೀರಾಮುಲು ಜೆಡಿಎಸ್ ನಾಯಕ ಜಿ. ಟಿ. ದೇವೇಗೌಡ ಭೇಟಿ ಉಪ ಚುನಾವಣೆ ಮೇಲೆ ಪ್ರಭಾವ ಬೀರಲಿದೆಯೇ? ಎಂಬ ಚರ್ಚೆ ಆರಂಭವಾಗಿದೆ. ಹುಣಸೂರು ಕ್ಷೇತ್ರದಲ್ಲಿ ಜಿ. ಟಿ. ದೇವೇಗೌಡರ ಪ್ರಭಾವ ಹೆಚ್ಚಿದೆ. ಇದು ಚುನಾವಣೆಯಲ್ಲಿ ಸಹಾಯಕ ವಾಗಲಿದೆಯೇ? ಕಾದು ನೋಡಬೇಕು.

Recent Articles

spot_img

Related Stories

Share via
Copy link