ದಾವಣಗೆರೆ:
ಜಿಲ್ಲಾ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್ ಅವರನ್ನು ಕುಂದಗೋಳ ವಿಧಾನಸಭೆಯ ಉಪಚುನಾವಣೆಯ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಕೆ.ಪಿ.ಸಿ.ಸಿ. ಅಧ್ಯಕ್ಷ ದಿನೇಶ್ ಗುಂಡೂರಾವ್ರವರು ಆದೇಶಿಸಿದ್ದಾರೆ . ಕುಂದಗೋಳ ವಿಧಾನಸಭೆಯ ವ್ಯಾಪ್ತಿಗೆ ಬರುವ ಅದರಗುಂಚಿ ಜಿಲ್ಲಾಪಂಚಾಯಿತಿಗೆ ಸಂಬಂಧಿಸಿದ ಅಂಚಟಗೇರಿ ಗ್ರಾಮ ಪಂಚಾಯಿತಿಯ ಜವಾಬ್ದಾರಿಯನ್ನು ವಹಿಸಿಕೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾವತಿ ಶಿವಳ್ಳಿಯವರ ಪರ ಪ್ರಚಾರ ಮಾಡಿ ಗೆಲುವಿಗೆ ಶ್ರಮಿಸಲು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕೆಂದು ಆದೇಶ ಪ್ರತಿಯಲ್ಲಿ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
