ದಲಿತ ಸಮೂಹದ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸಲು ಸರ್ಕಾರ ವಿಫಲ

ಚಳ್ಳಕೆರೆ

     ರಾಜ್ಯದ ಉಪಮುಖ್ಯಮಂತ್ರಿಯವರ ತವರು ಜಿಲ್ಲೆ ಹಾಗೂ ಅವರ ಕ್ಷೇತ್ರವಾದ ಕೊರಟಗೆರೆ ಗ್ರಾಮದಲ್ಲಿ ಇತ್ತೀಚೆಗೆ ತಾನೇ ದೇವಸ್ಥಾನ ಪ್ರವೇಶಿಸಿದ ಹರಿಜನ ವ್ಯಕ್ತಿಗೆ ಅಲ್ಲಿನ ಪಂಚಾಯಿತಿ ದಂಡ ವಿಧಿಸಿ ಅವನಿಗೆ ಅವಮಾನ ಮಾಡಿತ್ತು. ಈ ಪ್ರಕರಣ ಹಸಿರಾಗಿರುವಾಗಲೇ ಗುಂಡ್ಲಪೇಟೆಯಲ್ಲಿ ದಲಿತ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ದೌರ್ಜನ್ಯವೆಸಗಿದ್ದು

     ರಾಜ್ಯದಲ್ಲಿ ದಲಿತ ಮೇಲೆ ನಡೆಯುವ ದೌರ್ಜನ್ಯವನ್ನು ನಿಯಂತ್ರಿಸುವಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟದ ಸರ್ಕಾರ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಎಂ.ಎಸ್.ಬಣ) ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ನಗರಂಗೆರೆ ಶ್ರೀನಿವಾಸ್ ಆರೋಪಿಸಿದ್ದಾರೆ.

     ಅವರು, ಗುರುವಾರ ತಹಶೀಲ್ದಾರ್‍ಗೆ ಮನವಿ ಪತ್ರ ನೀಡಿ ಕೊರಟಗೆರೆ ಮತ್ತು ಗುಂಡ್ಲಪೇಟೆಯಲ್ಲಿ ದಲಿತ ವ್ಯಕ್ತಿಗಳ ಮೇಲೆ ದೌರ್ಜನ್ಯ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪೊಲೀಸರು ಕೂಡಲೇ ಅವರನ್ನು ಬಂಧಿಸಿ ನ್ಯಾಯ ಒದಗಿಸಬೇಕು. ನೊಂದ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

      ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ, ಎರಡೂ ಪ್ರಕರಣಗಳಿಗೆ ಸಂಬಂಧಪಟ್ಟಂತೆ ತಾವು ನೀಡಿರುವ ಮನವಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಿಕೊಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದಲಿತ ಸಂಘóರ್ಷ ಸಮಿತಿ ಅಧ್ಯಕ್ಷ ಓಬಳೇಶ, ದೇವರಾಜ, ದೊಡ್ಡೆರಿ ವೆಂಕಟೇಶ್, ನಾಗರಾಜ್, ತಿಪ್ಪೇಸ್ವಾಮಿ, ಲಂಕೇಶ, ಮಂಜುನಾಥ, ಕಾಂತರಾಜ್, ಕುಮಾರ್, ಓಂಕಾರಮೂರ್ತಿ., ರಾಜು, ನವಿನ್, ವೇದಮೂರ್ತಿ ಮುಂತಾದವರು ಮನವಿ ಅರ್ಪಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link