ಎಂ ಎನ್ ಕೋಟೆ :
ಗುಬ್ಬಿ ತಾಲ್ಲೂಕಿನ ಇತಿಹಾಸ ಪ್ರಸಿದ್ದ ಎಂ ಎನ್.ಕೋಟೆ ಗ್ರಾಮದ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತ್ತು.
ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿದ್ದವು.ಜಾತ್ರಾ ಮಹೋತ್ಸವ ಅಂಗವಾಗಿ ಅಮ್ಮನವರಿಗೆ ವಿಶೇಷ ಅಲಂಕಾರ ಹಾಗೂ ದೇವಾಲಯಕ್ಕೂ ಕೂಡ ವಿಶೇಷ ಮಾಡಲಾಗಿತ್ತು.ಮಧ್ಯಾಹ್ನ ದಂಡಿನ ಮಾರಮ್ಮ ದೇವಿಯ ಕಳಸ ಮಹೋತ್ಸವ ಹಾಗೂ ಗಟಿಭಾನ ಅದ್ದೂರಿಯಾಗಿ ಊರಿನ ರಾಜಬೀದಿಯಲ್ಲಿ ನಡೆಯಿತ್ತು. ಜಿಲ್ಲೆಯ ವಿವಿಧಡೆಗಳಿಂದ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದರು.ಭಕ್ತಾಧಿಗಳಿಗೆ ಮಹಾ ದಾಸೋಹ ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್ ಹಾಗೂ ಪ್ರಧಾನ ಅರ್ಚಕ ಬಸವರಾಜು ಹಾಗೂ ಭಕ್ತಾಧಿಗಳು ಭಾವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
