ಕೋಟೆ ನಾಡಿನಲ್ಲಿ ದರ್ಶನ್‍ಗೆ ಅಭಿಮಾನಿಗಳ ಭವ್ಯ ಸ್ವಾಗತ

ಚಿತ್ರದುರ್ಗ

     ಕೋಟೆನಗರಿ ಚಿತ್ರದುರ್ಗಕ್ಕೆ ಸೋಮವಾರ ಆಗಮಿಸಿದ ಖ್ಯಾತ ಚಿತ್ರನಟ ದರ್ಶನ್ ಅವರಿಗೆ ಅಭಿಮಾನಿಗಳು ಅದ್ದೂರಿಯಾಗಿ ಬರಮಾಡಿಕೊಂಡರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ‘ಗಂಡುಗಲಿ ಮದಕರಿ ನಾಯಕ’ ಚಿತ್ರಕ್ಕೆ ಇಂದು ಚಿತ್ರದುರ್ಗದಲ್ಲಿ ಮುಹೂರ್ತ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಚಿತ್ರತಂಡ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದಾಗ ಡಿ ಬಾಸ್ ನೋಡಲು ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದಾರೆ.

     ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ತನ್ನ ನೆಚ್ಚಿನ ನಾಯಕ ನಟನಿಗೆ ಡೋಲು ಬಾರಿಸುತ್ತಾ ಕೇಕೆ ಹಾಕಿ ಅದ್ದೂರಿಯಾಗಿ ಸ್ವಾಗತಿಸಿದರು. ಮದಕರಿ ನಾಯಕ ಪ್ರತಿಮೆಗೆ ಹೂಮಾಲೆ ಅರ್ಪಿಸಲು ಆಗಮಿಸಿದಾಗ ಅಲ್ಲಿ ಜನಜಾತ್ರೆಯೇ ನೆರೆದಿತ್ತು. ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯವಸ್ತವಾಗಿತ್ತು.

   ಇದಕ್ಕೂ ಮುನ್ನ ನಗರದ ನೀಲಕಂಠೇಶ್ವರ ದೇವಸ್ಥಾನದಲ್ಲಿ ನಟ ದರ್ಶನ್ ಹಾಗೂ ಗಂಡುಗಲಿ ಮದಕರಿ ನಾಯಕ ಚಿತ್ರತಂಡ ವಿಶೇಷ ಪೂಜೆ ಸಲ್ಲಿಸಿತು. ಬಳಿಕ ನೀಲಕಂಠೇಶ್ವರ, ಬರಗೇರಮ್ಮ, ಉಚ್ಚಂಗಿ ಯಲ್ಲಮ್ಮ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಮೊದಲನೆಯದಾಗಿ ದರ್ಶನ್ ಹಾಗೂ ಚಿತ್ರತಂಡದ ಸದಸ್ಯರು ನೀಲಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ದರ್ಶನ್‍ಗೆ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಸಾಹಿತಿ ಬಿ.ಎಲ್ ವೇಣು ಹಾಗೂ ಕಲಾವಿದರಾದ ದೊಡ್ಡಣ. ಶ್ರೀನಿವಾಸ ಮೂರ್ತಿ ಸೇರಿದಂತೆ ಮತ್ತಿತರರು ಸಾಥ್ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link