ಬೆಂಗಳೂರು:
ಪದೇ ಪದೇ ದೇಶವಿರೋಧಿ ಘೋಷಣೆ ಕೂಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಶನಿವಾರ ಇಲ್ಲಿ ಎಚ್ಚರಿಕೆ ನೀಡಿದರು.ಯುವಕರು, ಯುವತಿಯರು ಇಂಥ ಕೃತ್ಯಗಳಿಗೆ ಮುಂದಾಗುತ್ತಿರುವುದು ದುರದೃಷ್ಟಕರ. ಇದರ ಹಿಂದೆ ಕೆಲವರ ಕೈವಾಡ ಇದ್ದು ಅದರ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ದವರಿಗೆ ತಿಳಿಸಿದರು.
ಸಿಎಎ ಅಂದರೆ ಏನು? ಅದರಿಂದಾಗುವ ಪ್ರಯೋಜನಗಳ ಬಗ್ಗೆಯೂ ಸಾರ್ವಜನಿಕರಿಗೆ ತಿಳಿಸುವ ಕೆಲಸವನ್ನೂ ಮಾಡಲಾಗುವುದು ಎಂದು ಹೇಳಿದರು.ಸಮಾಜದಲ್ಲಿ ವಿನಾಕಾರಣ ಗೊಂದಲ ನಿರ್ಮಾಣ ಮಾಡುತ್ತಿರುವುದು ದುಃಖಕರ. ಎಲ್ಲಾ ಪಕ್ಷಗಳ ಮುಖಂಡರೂ ಇದನ್ನು ಗಮನಿಸಬೇಕು ಎಂದರು.
ಅಮಾಯಕರು, ಮುಗ್ದರಲ್ಲಿ ಗೊಂದಲ ಮೂಡಿಸಬಾರದು. ಪ್ರತಿಭಟನೆ ಸಂವಿಧಾನಿಕ ಹಕ್ಕು, ಆದರೆ ಇಂತಹ ಕೃತ್ಯಗಳು ಆದಾಗ ಸಂಘಟಕರನ್ನು ಗುರ್ತಿಸಿ, ಅವರ ಮೇಲೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
