ಬೆಂಗಳೂರು
ವೇಗವಾಗಿ ಬೈಕ್ನಲ್ಲಿ ಹೋಗುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಫುಟ್ಪಾತ್ ಕಲ್ಲಿಗೆ ಡಿಕ್ಕಿ ಹೊಡೆದು ಮೃತಪಟ್ಟಿರುವ ದುರ್ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಮನೋಜ್ ಭಾರದ್ವಾಜ್ (23) ಎಂದು ಗುರುತಿಸಲಾಗಿದೆ. ಕಾಲೇಜು ಮುಗಿಸಿಕೊಂಡು ಕೆಎಚ್ಬಿ ಬಳಿಯ ಮನೆಗೆ ಅಪಾಚೆ ಬೈಕ್ನಲ್ಲಿ ಹೋಗುತ್ತಿದ್ದ ಭಾರದ್ವಾಜ್ ಮಾರ್ಗಮಧ್ಯೆ ಫುಟ್ಪಾತ್ ಕಲ್ಲಿಗೆ ಡಿಕ್ಕಿಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಆತನನ್ನು ಸ್ಥಳೀಯರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಕೆಂಗೇರಿ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/accident.gif)