ಲಾಕ್ ಡೌನ್ ಸಡಿಲಿಕೆ : ತಜ್ಞರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ : ಸಿಎಂ

ಬೆಂಗಳೂರು

     ಲಾಕ್ ಡೌನ್ ಸಡಿಲಿಕೆ, ಕೇಂದ್ರದ ಮಾರ್ಗಸೂಚಿಯಂತೆ ಯಾವ ವಲಯಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು ಎನ್ನುವ ಕುರಿತು ಏಪ್ರಿಲ್ 20 ರಂದು ತಜ್ಞರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದುಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

   ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಪ್ರಕರಣ ಕಳೆದ ಮೂರು ದಿನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾದ ಹಿನ್ನಲೆಯಲ್ಲಿ, ಸರ್ಕಾರದ ಸಂಬಂಧಪಟ್ಟ ಸಚಿವರು, ಹಿರಿಯ ಅಧಿಕಾರಿಗಳು, ತಜ್ಞ ವೈದ್ಯರ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದರು.

    ಲಾಕ್ ಡೌನ್ ಸಡಲಿಗೊಳಿಸಿದ‌ ನಂತರ ಪ್ರಕರಣ ಹೆಚ್ಚದಂತೆ ನಿಭಾಯಿಸಲು‌ ತೀರ್ಮಾನಿಸಲಾಯಿತು, ಲಾಕ್ ಡೌನ್ ಸಡಿಲಿಕೆ ಸಂದರ್ಭದಲ್ಲಿ ಕಂಪನಿಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಲು ತಜ್ಞರು ಅಭಿಪ್ರಾಯ ಕೊಟ್ಟಿದ್ದು ಅದರಂತೆ ಲಾಕ್ ಡೌನ್ ನಂತರ ಯಾವ ರೀತಿ ಮುನ್ನಡೆಯಬೇಕು ಎನ್ನುವ ಕುರಿತು ಮಾರ್ಗಸೂಚಿ‌ ರಚಿಸಲು ತೀರ್ಮಾನಿಸಲಾಯಿತು, ಏಪ್ರಿಲ್ 20 ರಂದು ಮತ್ತೊಂದು ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

    ಇಂದು ಮತ್ತೆ ಹಲವಾರರು ಪ್ರಕರಣ ಪತ್ತೆಯಾಗಿದ್ದು, ಸೋಂಕು ಪತ್ತೆ ವಿಧಾನಕ್ಕ ಹೆಚ್ಚು ಆದ್ಯತೆ ನೀಡಲು ಸೂಚನೆ ನೀಡಲಾಗಿದೆ, ರೋಗ ಲಕ್ಷಣ ಕಂಡು ನಾಲ್ಕೈದು ದಿನದ ನಂತರ ಬರುತ್ತಿದ್ದಾರೆ ಆದರೆ ಲಕ್ಷಣ ಕಂಡ ಕೂಡಲೇ ವೈದ್ಯರ ಸಂಪರ್ಕಿಸಬೇಕಾಗುತ್ತದೆ. ಇಷ್ಟಾದರೂ ಇಡೀ ದೇಶದಲ್ಲಿ ಸೋಂಕು ಪತ್ತೆ ವಿಧಾನದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.ಕೇರಳದಲ್ಲಿ 47.16 ರಷ್ಟು ಪತ್ತೆಯಾಗುತ್ತಿದ್ದರೆ ರಾಜ್ಯದಲ್ಲಿ ಶೇ 43 ರಲ್ಲಿ 1ಪಾಸಿಡಿವ್ ಬರುತ್ತಿದೆ. ಇದು ಸ್ವಲ್ಪ ಸಮಾಧಾನ ತರುವ ಸಂಗತಿಯಾಗಿದೆ ಈವರೆಗೆ 17168 ಪರೀಕ್ಷೆ ಮಾಡಲಾಗಿದೆ ಎಂದರು.

    1 ಲಕ್ಷ ರಾಪಿಡ್ ಟೆಸ್ಟ್ ಕಿಟ್ ಗೆ ಆರ್ಡರ್ ನೀಡಲಾಗಿದೆ ಆದರೆ ನಾವು ನಡೆಸುತ್ತಿರುವ ರಿಯಲ್‌ಟೈಮ್ ಪಿಸಿಆರ್ ಟೆಸ್ಟ್ ಶೇ.100 ರ ಖಚಿತತೆ ಇದೆ, ಈಗ ರ್ಯಾಪಿಡ್ ಟೆಸ್ಡ್ ಕೇವಲ ಆಂಟಿ ಬಾಡಿ ಕುರಿತು  ಪ್ರಾಥಮಿಕ ಪತ್ತೆಗೆ ಮಾತ್ರ ಬಳಸಿಕೊಳ್ಳಲಾಗುತ್ತದೆ ಎಂದರು.

    ಯುಸಿಯು ನಲ್ಲಿ ರೋಗಿಗಳಿಗಾಗಿ ವಿಶೇಷ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ, ಪ್ಲಾಸ್ಮ ಚಿಕಿತ್ಸೆಗೆ ಅನುಮತಿ ಕೋರಿ ಮನವಿ ಮಾಡಿದ್ದು, ಐಸಿಎಂ ಆರ್ ಅನುಮತಿಗಾಗಿ ಕಾಯುತ್ತಿದ್ದೇವೆ.ಯಾವುದೇ ಪ್ರಕರಣ ಇರದ ಜಿಲ್ಲೆಯಲ್ಲೂ ಈ ಲಕ್ಷಣದ ತಪಾಸಣೆ ನೀಡಲು ಸೂಚನೆ ನೀಡಲಾಗಿದೆ. 11 ಜಿಲ್ಲೆಗಳಲ್ಲಿ ಯಾವುದೇ ಸೋಂಕು ಪ್ರಕರಣಗಳು ವರದಿಯಾಗಿಲ್ಲ. ಆದರೆ ತಪಾಸಣೆ ನಡೆಸಿದಾಗಲೇ ವಾಸ್ತವ ಸ್ಥಿತಿ ಗೊತ್ತಾಗಲಿದೆ, ಏಪ್ರಿಲ್ ಅಂತ್ಯದೊಳಗೆ ಹೊಸದಾಗಿ 10 ಪ್ರಯೋಗಾಲಯ ಆರಂಭಕ್ಕೆ ಸೂಚನೆ ನೀಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

     ಅಕ್ರಮ ಸಕ್ರಮ ಕುರಿತು ಚರ್ಚೆ ನಡೆಸಲಾಯಿತು, ಹಲವು ಅನಧಿಕೃತ ಬಡವಾಣೆ, ಕಟ್ಟಡಗಳಿಗೆ ಈಗಾಗಲೇ ಸರ್ಕಾರ ಮೂಲಸೌಕರ್ಯ ಕಲ್ಪಿಸಿದೆ ಆದರೆ ಸರ್ಕಾರಕ್ಕೆ ತೆರಿಗೆ ಬರುತ್ತಿಲ್ಲ. ಹಾಗಾಗಿ ಅವುಗಳ ಸಕ್ರಮದ ಮೂಲಕ ರಾಜಸ್ವ ಸಂಗ್ರಹದ ಉದ್ದೇಶವನ್ನು ಹೊಂದಿದ್ದೇವೆ ಬೆಂಗಳೂರಿನಲ್ಲಿ,2.93 ಲಕ್ಷ ಅಂದಾಜು‌ ಅಕ್ರಮ ಕಟ್ಟಡ,ರಾಜ್ಯದಲ್ಲಿ 35 ಲಕ್ಷ ಅಕ್ರಮ‌ಕಟ್ಟಡ ಇರುವ ಅಂದಾಜಿದೆ. ಇತರ ರಾಜ್ಯ ಯಾವ ರೀತಿ ದಂಡ ವಿಧಿಸಿ ಸಕ್ರಮ ಮಾಡಿವೆ ಎನ್ನುವ ಕುರಿತು ಅಧ್ಯಯನ ನಡೆಸಿ ನಂತರ ಅಂತಿಮ ತೀರ್ಮಾನ ಮಾಡಲಾಗುತ್ತದೆ ಇದಕ್ಕಾಗಿ ನಗರಾಭಿವೃದ್ಧಿ ಇಲಾಖೆ ಒಂದು ವಾರದಲ್ಲಿ ಹೊಸ ಮಾರ್ಗಸೂಚಿ ರಚಿಸಲಿದೆ ಎಂದರು.

    ಸಣ್ಣ ಕೈಗಾರಿಕೆ ಆರಂಭದ ಮಾಡುವ ಬೇಡಿಕೆ ಕುರಿತು ಚರ್ಚೆ ನಡೆಸಿದ್ದೇವೆ. ಜೊತೆಗೆ ಕಟ್ಟಡ ಕಾರ್ಮಿಕರಿಗೆ ಅವರು ಕೆಲಸ ಮಾಡುವ ಸ್ಥಳದಲ್ಲೇ ಅವರ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ ಕೆಲಸ ಆರಂಭಕ್ಕೆ ಅವಕಾಶ ನೀಡುವ ಚಿಂತನೆ ಇದೆ. ಪರಿಸ್ಥಿತಿಸೂಕ್ತವಾಗಿದ್ದರೆ ಎಲ್ಲವೂ 20 ರಂದು ಅಂತಿಮ ನಿರ್ಧಾರವಾಗಲಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link