ಎಂ ಎನ್ ಕೋಟೆ :
ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ರೈತಪರ ಚಿಂತಕರು ಅಭಿವೃದ್ಧಿಯ ಹರಿಕಾರರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೆಗೌಡರು ಸ್ಪರ್ಧಿಸುತ್ತಿರುವುದು ಅಭಿನಂದನಾರ್ಹವಾದುದಾಗಿದ್ದು ಎರಡು ಪಕ್ಷದ ಮುಖಂಡರು ಅವರ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುವ ಮೂಲಕ ಅತ್ಯಧಿಕ ಮತಗಳಿಂದ ಅವರನ್ನು ಗೆಲ್ಲಿಸಬೇಕು ಎಂದು ತಾಲ್ಲೂಕ್ ಪಂಚಾಯಿತಿ ಸದಸ್ಯೆ ಕರಿಯಮ್ಮ ರಮೇಶ್ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಮಂಚಲದೊರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಯಲ್ಲಿ ಮಾತನಾಡಿದ ಅವರು ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರನ್ನು ಮತ್ತೊಮ್ಮೆ ನಾವು ನಮ್ಮ ದೇಶದ ಪ್ರಧಾನಿಯಾಗಿ ಮಾಡೋಣ ಎಲ್ಲ ಮುಖಂಡರು ಕರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಸಮಿಶ್ರ ಸರ್ಕಾರದ ಮೂಲಕ ಇಡೀ ರಾಜ್ಯವನ್ನು ಸಮಗ್ರ ಅಭಿವೃದ್ಧಿಪಡಿಸುವುದರ ಜೂತೆಗೆ ಜನ ಸಾಮಾನ್ಯರಿಗೂ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಮಾಡಿದ್ದು ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಇಂತಹ ಹಿರಿಯ ರಾಜಕಾರಣಿ ಅವಶ್ಯಕತೆ ಇದ್ದು ಅವರಿಗೆ ನಮ್ಮೆಲ್ಲರ ಸಹಕಾರ ಕೊಡಬೇಕು ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಮೇಶ್ , ನರಸಿಂಹಮೂರ್ತಿ , ಮರಡಿ ರಂಗನಾಥ್ , ನಾಗರಾಜು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
