ಬಿಜೆಪಿ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಸಂಘಟನೆಮಾಡಿ

ಹೂವಿನಹಡಗಲಿ :

      ಬಿಜೆಪಿ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಯನ್ನು ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಹೇಳಿದರು.

      ಶನಿವಾರ ದ್ರಕ್ಷಾಯಣಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಪಕ್ಷಕ್ಕೆ 104 ಸ್ಥಾನವಿದ್ದರು ವಿರೋಧ ಪಕ್ಷದಲ್ಲಿ ನಾವಿದ್ದೇವೆ. ಕಾಂಗ್ರೆಸ್, ಜೆ.ಡಿ.ಎಸ್. ಮುಖಂಡರ ಹಗರಣಗಳನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಬಯಲಿಗೆಳೆಯುತ್ತಾರೆ ಎಂಬ ಭಯದಿಂದ ಬಿಜೆಪಿ ಪಕ್ಷವನ್ನು ಸರ್ಕಾರ ರಚನೆ ಮಾಡಲು ಬಿಡದೇ ಕಾಂಗ್ರೆಸ್ ನವರು ಜೆ.ಡಿ.ಎಸ್. ಮನೆ ಬಾಗಿಲಿಗೆ ಹೋಗಿ ಸರ್ಕಾರವನ್ನು ರಚನೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪರ ಆಡಳಿತವನ್ನು ಅಂತರ್‍ರಾಷ್ಟ್ರೀಯ ಮಟ್ಟದಲ್ಲೂ ಮೆಚ್ಚಿಗೆ ಗಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದರು.

       ತಾಲೂಕು ಬಿಜೆಪಿ ಅಧ್ಯಕ್ಷ ಎಂ.ಬಿ.ಬಸವರಾಜ ಮಾತನಾಡಿ ಪಕ್ಷದ ಕಾರ್ಯಕರ್ತರು ಪದಾಧಿಕಾರಿಗಳು, ಸಂಘಟನೆಯನ್ನು ಮಾಡುವುದರ ಮೂಲಕ ಪಕ್ಷವನ್ನು ಬಲವರ್ಧನೆಗೊಳಿಸಬೇಕೆಂದು ಕರೆ ನೀಡಿದರು.

      ಮಾಜಿ ಎಂ.ಎಲ್.ಸಿ. ಮೃತ್ಯುಂಜಯ ಜಿನಗಾ ಮಾತನಾಡಿದರು. ಜಿ.ಪಂ.ಸದಸ್ಯ ಎಸ್.ಕೊಟ್ರೇಶ, ತಾ.ಪಂ.ಸದಸ್ಯ ಈಟಿ ಲಿಂಗರಾಜ, ಬಸವರಾಜಪ್ಪ, ಹಾಗೂ ದೀಪದ ಕೃಷ್ಣಪ್ಪ, ಮಧುನಾಯ್ಕ, ಉಮ್ಮೆಸಲ್ಮಾ, ಎಂ.ಬಸವರಾಜ, ಶಿವಕುಮಾರ ಗಡಿಗಿ, ಸಂತೋಷ, ಲಂಕೇಶ್ವರನಾಯ್ಕ, ಶಿರಾಜ ಬಾವಿಹಳ್ಳಿ, ಸೇರಿದಂತೆ ಇತರರು ಇದ್ದರು. ಕಾರ್ಯದರ್ಶಿ ಸಂಜೀವರೆಡ್ಡಿ ಕಾರ್ಯಕ್ರಮ ನಿರ್ವಹಿಸಿದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link