ದಾವಣಗೆರೆ:
ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದಂತೆ, ಸಾರ್ವಜನಿಕರು ಬಣ್ಣದ ಹಬ್ಬ ಹೋಳಿಯ ಓಕುಳಿ ಆಚರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್.ಆರ್ ಸೂಚನೆ ನೀಡಿದ್ದಾರೆ.
ಮಾ.21ರಂದು ಮಧ್ಯಾಹ್ನ 12 ಗಂಟೆಯೊಳಗೆ ಬಣ್ಣದ ಓಕುಳಿ ಆಚರಿಸಬೇಕು. ಅಲ್ಲದೇ, ಯಾವುದೇ ಕಾರಣಕ್ಕೂ ಯಾರ ಮೇಲೂ ಸಹ ಒತ್ತಾಯ ಪೂರ್ವಕವಾಗಿ ಬಣ್ಣ ಎರಚಬಾರದು ಎಂದು ಸಲಹೆ ನೀಡಿದ್ದಾರೆ.
ಒತ್ತಾಯ ಪೂರ್ವಕವಾಗಿ ಬಣ್ಣ ಎರಚುವಂತಿಲ್ಲ. ಅಲ್ಲದೇ, ಆಯಿಲ್ ಪೇಂಟ್, ವಾರ್ನಿಷ್, ಆಸಿಡ್, ಡಾಂಬರ್ ಮತ್ತಿತರ ಯಾವುದೇ ಅಪಾಯಕಾರಿ ರಾಸಾಯನಿಕ ಮಿಶ್ರಣಗಳನ್ನು ಮೈಮೇಲೆ ಎರಚಬಾರದು. ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರ ಮತ್ತು ನೌಕರರ, ಶಾಲಾ ವಿದ್ಯಾರ್ಥಿಗಳ ಮೇಲೆ ಬಣ್ಣ ಎರಚಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಸಾರ್ವಜನಿಕ ನೀರು ಸರಬರಾಜು ಸ್ಥಳಗಳಲ್ಲಿ ಬಣ್ಣ ತೊಳೆದು ನೀರನ್ನು ಮಲೀನ ಮಾಡಬಾರದು. ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಕಂಡುಬಂದರೆ ಕ್ರಮಕೈಗೊಳ್ಳಲಾಗುವುದು. ಧ್ವನಿ ವರ್ಧಕ ಅಳವಡಿಕೆ ನಿಯಮವನ್ನು ಮತ್ತು ಅನುಮತಿಯನ್ನು ಸಂಬಂಧಪಟ್ಟ ಆಯೋಜಕರು ಕಟ್ಟುನಿಟ್ಟಾಗಿ ಪಾಲಿಸಬೇಕು. ಬಣ್ಣ ಹಚ್ಚುವ ಕೊನೆಯ ಹಂತದಲ್ಲಿ ಕೆಲ ಕಿಡಿಗೇಡಿಗಳು ಮೈಮೇಲಿನ ಬಟ್ಟೆಗಳನ್ನು ಹರಿದು ಸಾರ್ವಜನಿಕವಾಗಿ ಅಸಭ್ಯವಾಗಿ ನೃತ್ಯ ಮಾಡುವವರ ವಿರುದ್ಧ ಕೈಗೊಳ್ಳಲಾಗುವುದು. ದ್ವಿಚಕ್ರವಾಹನಗಳಲ್ಲಿ ಮೂರು ಮಂದಿಯ ಸವಾರಿ, ಕರ್ಕಶ ಶಬ್ದದ ಹಾರನ್, ಗುಂಪು ಕಟ್ಟಿ ಕುಣಿಯುವುದು, ನಿಲ್ಲುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.ಹೋಳಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಮಾರುಕಟ್ಟೆಗಳ ಬಳಿಯಲ್ಲಿ ಬಣ್ಣ ಹಾಗೂ ಪಿಚಕಾರಿ ಮಾರಾಟ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
