ಹುಳಿಯಾರು
ಕೇಂದ್ರ ಸರ್ಕಾರವು ವಿದ್ಯುತ್ ವಲಯವನ್ನು ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ಹುಳಿಯಾರು ಪಟ್ಟಣದ ಬೆಸ್ಕಾಂ ನೌಕರರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಪಟ್ಟಣದ ಬೆಸ್ಕಾಂ ಕಚೇರಿಯ ಮುಂದೆ ಸರ್ಕಾರದ ಖಾಸಗೀಕರಣದ ನೀತಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ 2020 ರ ವಿದ್ಯುತ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದ್ದು, ಇದರಿಂದ ಸಾಕಷ್ಟು ಸಮಸ್ಯೆಯಾಗಲಿದೆ ಎಂದು ದೂರಲಾಯಿತು.
ಖಾಸಗೀಕರಣದಿಂದ ರೈತರು ಮತ್ತು ಬಡವರ ಮೇಲೆ ದುಷ್ಪರಿಣಾಮ ಬೀರಲಿದೆ. ಅಲ್ಲದೇ ಖಾಸಗೀಕರಣದ ನೀತಿ ಕಾರ್ಮಿಕರಿಗೆ ಮರಣ ಶಾಸನವಾಗಲಿದೆ. ವಿದ್ಯುತ್ ಇಲಾಖೆ ಲಾಭದಲ್ಲಿ ನಡೆಯುತ್ತಿದ್ದರೂ ಸಹ, ಇಲಾಖೆಯನ್ನು ಖಾಸಗೀಕರಣ ಮಾಡುತ್ತಿರುವ ಕ್ರಮ ಸರಿಯಲ್ಲ. ಸರ್ಕಾರ ಕೂಡಲೇ ಈ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಲಾಯಿತು.ಸೆಕ್ಷನ್ ಆಫೀಸರ್ ಉಮೇಶ್ ನಾಯಕ್, ಮೂರ್ತಪ್ಪ ಸೇರಿದಂತೆ 50 ಕ್ಕೂ ಹೆಚ್ಚು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ನಂತರ ಕಪ್ಪುಪಟ್ಟಿ ಧರಿಸಿ ಕೆಲಸ ಮುಂದುವರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
