ಬೆಂಗಳೂರು:
ನಮ್ಮ ರಾಜ್ಯದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಎಚ್.ಎಸ್ ದೊರೆಸ್ವಾಮಿ ಅವರಿಗೆ ಪ್ರತಿಷ್ಠಿತ ರಾಮನಾಥ ಗೋಯೆಂಕಾ ಪ್ರಶಸ್ತಿ ಲಭಿಸಿದೆ.
ಸೋಮವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರಿಗೆ ಜೀವಮಾನ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ.ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.
ರಾಮನಾಥ ಗೋಯೆಂಕಾ ಅವರ ಪುತ್ರ ಪ್ರಶಾಂತ್ ಗೊಯೆಂಕಾ ಪ್ರಶಸ್ತಿ ಪ್ರಧಾನ ಮಾಡಿದರು. ಈ ವೇಳೆ ಮಾತನಾಡಿದ ಅವರು ಪತ್ರಿಕೋದ್ಯಮ ಮುಕ್ತ ಹಾಗೂ ನಿಷ್ಪಕ್ಷಪಾತವಾಗಿರಬೇಕು. ರಾಮನಾಥ ಗೋಯೆಂಕಾ ಅವರ ಯೋಚನೆಗಳನ್ನು ವಾಪಸ್ ತರಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಹೇಳಿದರು.