ಕಾರು ಅಪಘಾತ: ಪ್ರಾಣಾಪಾಯದಿಂದ ಧ್ರುವ ಸರ್ಜಾ ಪಾರು

ಬೆಂಗಳೂರು

     ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಬಳ್ಳಾರಿಯಲ್ಲಿ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಬಳ್ಳಾರಿಯ ಹೊರವಲಯದಲ್ಲಿ ಅವರ ಕಾರು ಅಪಘಾತಕ್ಕಿಡಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

   ‘ಪೊಗರು’ ಚಿತ್ರದ ಚಿತ್ರೀಕರಣ ಮುಗಿಸಿ ಬಳ್ಳಾರಿ ಯಿಂದ ಬೆಂಗಳೂರಿಗೆ ಮರಳುತ್ತಿದ್ದಾಗ ಬೆಳಗ್ಗೆ 4 ಗಂಟೆಗೆ ಅಪಘಾತ ಸಂಭವಿಸಿದೆ.ಕಾರು ಚಾಲಕ ಮುತ್ತು ಅವರ ಕೈಗೆ ಪೆಟ್ಟಾಗಿದೆ ಎಂದು ಚಿತ್ರ ತಂಡದ ಮೂಲಗಳಿಂದ ತಿಳಿದು ಬಂದಿದೆ.ನಂದ ಕಿಶೋರ್ ನಿರ್ದೇಶಿಸುತ್ತಿರುವ ‘ಪೊಗರು’ ಚಿತ್ರದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಕಳೆದ 15 ದಿನಗಳಿಂದ ನಾಯಕ ನಟ ಧ್ರುವ ಸರ್ಜಾ ಸೇರಿದಂತೆ ಚಿತ್ರತಂಡ ಬಳ್ಳಾರಿಯಲ್ಲಿ ಬೀಡುಬಿಟ್ಟಿತು.

    ಇಂದು ಮುಂಜಾನೆ ಶೂಟಿಂಗ್ ಮುಗಿಸಿ ಧುವ ಸರ್ಜಾ, ಕಾರಿನಲ್ಲಿ ಸ್ನೇಹಿತರೊಂದಿಗೆ ಮರಳುವಾಗ ಈ ಅಹಿತಕರ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ ಪೊಗರು ಚಿತ್ರ ನಿರ್ಮಾಣವಾಗುತ್ತಿದ್ದು, ನಟಿ ರಶ್ಮಿಕಾ ಮಂದಣ್ಣ ಅವರು ಧ್ರುವ ಸರ್ಜಾಗೆ ಜೋಡಿಯಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap