ಬೆಂಗಳೂರು
ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಡಿ.12ರಂದು ಚುನಾವಣೆ ನಡೆಯಲಿದೆ.ಇಂದು ಅಧಿಸೂಚನೆ ಹೊರಬಿದ್ದಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಡಿ.2ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ಡಿ.3ರಂದು ನಾಮಪತ್ರಗಳ ಪರಿಶೀಲನೆ ನಡೆದು ನಾಮಪತ್ರ ಹಿಂಪಡೆಯಲು 5 ಕಡೆಯ ದಿನ.
ಅಗತ್ಯ ಕಂಡುಬಂದಲ್ಲಿ ಡಿ.12ರಂದು ಬೆಳಗ್ಗೆ 9ರಿಂದ 4ರವರೆಗೆ ಮತದಾನ ನಡೆಯಲಿದ್ದು, 5 ಗಂಟೆಗೆ ಮತಗಳ ಎಣಿಕೆ ನಡೆಯಲಿದೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯಾಗಿರುವ ಎಂ.ಕೆ.ವಿಶಾಲಾಕ್ಷಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ಇದ್ದಕ್ಕಿದ್ದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಡಿ.12ರಂದು ಚುನಾವಣೆ ನಡೆಯಲಿದೆ.ಈಗಿನ ಬಲಾಬಲದ ಪ್ರಕಾರ ಆಡಳಿತಾರೂಢ ಬಿಜೆಪಿ ರಾಜ್ಯಸಭೆಯ ಒಂದು ಸ್ಥಾನವನ್ನು ನಿರಾಯಾಸವಾಗಿ ಗೆಲ್ಲಲಿದೆ.
ಒಂದು ವೇಳೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳು ಕಂಡುಬಂದಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
