ಕೋಲಾರ : ಹಾಲಿ ಸಂಸದರಿಗೆ ಎಚ್ಚರಿಕೆ ನೀಡಿದ ಮಾಜಿ ಸಂಸದ..!

ಕೋಲಾರ:

     ನಿನ್ನೆ ಕಾರ್ಯಕ್ರಮವೊಂದರಲ್ಲಿ ಕೆ. ಎಸ್ ಈಶ್ವರಪ್ಪ ಅವರು ಕೊಟ್ಟ ಮುಸ್ಲಿಂ ವಿರೋಧಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ಕೆ.ಎಚ್ ಮುನಿಯಪ್ಪ ಅವರು, ದೇಶದಲ್ಲಿ ಸ್ವಾತಂತ್ರ್ಯಕ್ಕಾಗಿ ಹಿಂದೂ ಮುಸ್ಲಿಂರು ಒಗ್ಗಟ್ಟಾಗಿ ಹೋರಾಡಿದ್ದಾರೆ ಮತ್ತು ಮುಸ್ಲಿಂ ಸಮುದಾಯದವರು ದೇಶದ ಒಂದು ಭಾಗವಾಗಿ ಜೀವನ ನಡೆಸುತ್ತಿದ್ದಾರೆ ಇದಕ್ಕೆ ಹುಳಿ ಹಿಂಡುವ ಕೆಲಸ ಮಾಡಬೇಡಿ.

    ಕೆ.ಎಸ್ ಈಶ್ವರಪ್ಪ ಅವರು ಮುಂಬರುವ ಮಧ್ಯಂತರ ಚುನಾವಣೆ ದೃಷ್ಟಿಯಿಂದ ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂದು ಮುನಿಯಪ್ಪ ಅವರು ಕಿಡಿಕಾರಿದ್ದಾರೆ.

   ಹಾಲಿ ಬಿಜೆಪಿ ಸಂಸದ ಎಸ್. ಮುನಿಸ್ವಾಮಿ ವಿರುದ್ದ ಕಿಡಿಕಾರಿದ ಅವರು,ಮೊದಲು ಜಿಲ್ಲೆಯ ಸಂಸದರಾಗಿ ಕೆಲಸ ಮಾಡಿ, ನಿಮಗೆ ಕೆಲಸ ಮಾಡಲು ಆಗದಿದ್ದರೆ ಚಿಲ್ಲರೆ ರಾಜಕೀಯ ಬಿಡಿ ನಂತರ ನನ್ನ ಬಗ್ಗೆ ಅಸಂಬದ್ದವಾಗಿ ಮಾತನಾಡುವುದನ್ನು ಬಿಟ್ಟು ಅಭಿವೃದ್ಧಿ ಕಡೆ ಗಮನಕೊಡಿ ಎಂದು ಹಾಲಿ ಸಂಸದರಿಗೆ ತಿಳುವಳಿಕೆ ಮಾತುಗಳನ್ನು ಹೇಳಿದರು.ಸುಖಾ ಸುಮ್ಮನೆ ನನ್ನ ಮೇಲೆ ಆರೋಪ ಮಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮುನಿಸ್ವಾಮಿಯವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap