ಬೆಂಗಳೂರು
ರಾಜ್ಯದಲ್ಲಿ ಕಳೆದ ವರ್ಷ ರಾಜ್ಯದಲ್ಲಿ ಬೆಳೆವಿಮೆಯಿಂದ ಕೆಲವು ರೈತರು ವಂಚಿತರಾಗಿರುವ ವಿಷಯ ಗಮನಕ್ಕೆ ಬಂದಿದ್ದು, ಈ ವರ್ಷ ಎಲ್ಲಾ ರೈತರಿಗೂ ಬೆಳೆ ವಿಮೆ ತಲುಪಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಕೃಷಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದಲ್ಲಿಂದು ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದ ನಂತರ ಮಾತನಾಡಿದ ಅವರು ಪ್ರಸ್ತುತ ರಾಜ್ಯದಲ್ಲಿ ಬೆಳೆ ಮತ್ತು ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ಈ ಸಮೀಕ್ಷೆಗಳ ನಂತರ ಸರ್ಕಾರ ವರದಿ ಪಡೆದು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು
ಕಳೆದ ವರ್ಷ ಬೆಳೆ ವಿಮೆ ಯೋಜನೆಯಡಿ ಸಾಕಷ್ಟು ರೈತರಿಗೆ ಪ್ರಯೋಜನ ಆಗಿಲ್ಲ. ಈ ವರ್ಷ ಬೆಳೆವಿಮೆಯನ್ನು ರೈತರಿಗೆ ತಲುಪಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ