ತುಮಕೂರು:
ಬಿಜೆಪಿ ಕಾರ್ಯಕರ್ತರ ವಿರುದ್ಧ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೈತ್ರಿ ಪ್ರಚಾರದ ವಾಹನನಿನ್ನೆ ನಗರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ನೇತೃತ್ವದ ರೋಡ್ ಶೋ ವೇಳೆ ಸಮೀಪದಲ್ಲಿದ್ದ ಕಾಂಗ್ರೆಸ್-ಜೆಡಿಎಸ್ ಜಂಟಿ ಮಾಧ್ಯಮ ಕಚೇರಿ ಬಳಿ ನಿಲ್ಲಿಸಲಾಗಿದ್ದ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ ಮಾಡಿ ವಾಹನದ ಕಿಟಕಿ ಗಾಜುಗಳನ್ನು ಒಡೆದು ಹಾಕಲಾಗಿತ್ತು.
ಈ ಹಿನ್ನೆಲೆಯಲ್ಲಿ ಹೊಸ ಬಡಾವಣೆ ಪೊಲೀಸ್ ಠಾಣೆಗೆ ಮೈತ್ರಿ ಪಕ್ಷದ ಮುಖಂಡ ಬೆಳ್ಳಿ ಲೋಕೇಶ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಶಾಂತಿ ಭಂಗ, ಗುಂಪುಗೂಡಿ ದಾಂಧಲೆ ಪ್ರಕರಣ ದಾಖಲಿಸಿಕೊಂಡು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
