ರಾಹುಲ್ ವಿರುದ್ಧ ಟೀಕೆ : ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್..!

ರಾಯ್‌ಪುರ

       ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿರುವ ರಾಹುಲ್ ಗಾಂಧಿ ವಿರುದ್ಧದ ಟೀಕೆಗಾಗಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವಿರುದ್ಧ ಛತ್ತೀಸ್‌ಗಡದ ಕಾಂಗ್ರೆಸ್ ಮುಖಂಡರು ಮತ್ತು ಪದಾಧಿಕಾರಿಗಳು ರಾಜ್ಯದಾದ್ಯಂತ ಹಲವಾರು ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದ್ದಾರೆ.ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಮುಖ್ಯ ವಕ್ತಾರ ಸುಶೀಲ್ ಶುಕ್ಲಾ ಯುಎನ್‌ಐಗೆ ಈ ವಿಷಯವನ್ನು ದೃಢಪಡಿಸಿದ್ದಾರೆ.

       ರಾಹುಲ್ ವಿರುದ್ಧದ ತುಚ್ಛ ಮಟ್ಟದ ಟೀಕೆಗಳನ್ನು ವಿರೋಧಿಸಿ ರಾಜ್ಯಾದ್ಯಂತ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಯೂತ್ ಕಾಂಗ್ರೆಸ್ ಮತ್ತು ಕಾಂಗ್ರೆಸ್‌ನ ಪ್ರಮುಖ ಸಂಘಟನೆಗಳು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವಿರುದ್ಧ ರಾಜ್ಯದಾದ್ಯಂತ ಪೊಲೀಸ್ ಠಾಣೆಗಳಲ್ಲಿ ದೂರು ನೀಡಲು ಪ್ರಾರಂಭಿಸಿವೆ ಎಂದು ಅವರು ಹೇಳಿದ್ದಾರೆ.

       ರಾಹುಲ್ ವಿರುದ್ಧದ ಟೀಕೆಗಳ ಬಗ್ಗೆ ತಿಳಿದ ಕೂಡಲೇ ಸ್ವಾಮಿಯ ವಿರುದ್ಧ ದೂರು ನೀಡಲು ಪಿಸಿಸಿ ಮುಖ್ಯಸ್ಥ ಮೋಹನ್ ಮಾರ್ಕಮ್ ಅವರು ಶನಿವಾರ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಬಳಿಕ ಉಳಿದ ಕಾಂಗ್ರೆಸ್‌ ಮುಖಂಡರು ದೂರು ಸಲ್ಲಿಸಿದ್ದಾರೆ.

       ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಉತ್ತಮವಾಗಿ ಇರಬೇಕೆಂಬ ಉದ್ದೇಶದಿಂದ ಸ್ವಾಮಿ ದೀರ್ಘಕಾಲದಿಂದ ಗಾಂಧಿ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುತ್ತಿದ್ದಾರೆ. ಆದರೆ ಸ್ವಾಮಿ ತಮ್ಮ ಆ ಪ್ರಯತ್ನದಲ್ಲಿ ಯಶಸ್ವಿಯಾಗಲಿಲ್ಲ ಎಂದು ಅವರು ಆರೋಪಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap