ರಾಜಧಾನಿಯ ನೀರಿನ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ:

ಬೆಂಗಳೂರು

       ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಪರಿಹರಿಸುವುದು ನಮ್ಮ ಮೊದಲ ಆದ್ಯತೆ. ಈ ನಿಟ್ಟಿನಲ್ಲಿ ಲಿಂಗನಮಕ್ಕಿ ಜಲಾಶಯದಿಂದ ನಗರಕ್ಕೆ ನೀರನ್ನು ತರುವ ಯೋಜನೆಯ ಕುರಿತು ಇಂದು ಬಿಎಂಆರ್‍ಡಿಎನಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದೆವು. ಜನಾಭಿಪ್ರಾಯ ಪಡೆದುಕೊಂಡೇ ಈ ಯೋಜನೆಯತ್ತ ಹೆಜ್ಜೆ ಇಡಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

      ಬೆಂಗಳೂರು ನಗರಕ್ಕೆ ಲಿಂಗನಮಕ್ಕಿ ಜಲಾಶಯಯಿಂದ ನೀರುತರುವ ಬೃಹತ್‍ ಯೋಜನೆಗೆ ಡಿಪಿಆರ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪರಮೇಶ್ವರ ತಿಳಿಸಿದರು.

      ಬೆಂಗಳೂರು ನಗರದ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಲಿಂಗನಮಕ್ಕಿ ಜಲಾಶಯದಿಂದ ನೀರನ್ನು ತರುವ ಯೋಜನೆ ರೂಪುರೇಷೆಗಳ ಕುರಿತುಇಂದು ಬಿಎಂಆರ್‍ಡಿಎ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಪ್ರಸ್ತುತ ಕಾವೇರಿಯಿಂದ 1400 ಎಂಎಲ್‍ಡಿ ನೀರನ್ನು ನಗರಕ್ಕೆ ಹರಿಸಲಾಗುತ್ತಿದೆ. ಆದಾಗ್ಯೂ ನಗರದಲ್ಲಿ ನೀರಿನ ಸಮಸ್ಯೆಇದೆ. ಕೆಲವೆಡೆ ಕಾವೇರಿ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಸಾಯಕತೆ ವ್ಯಕ್ತಪಡಿಸಿದರು.

     ಕಾವೇರಿ ಐದನೇ ಹಂತದ ಯೋಜನೆಯಿಂದ ಹೆಚ್ಚೆಂದರೆ 800 ಎಂಎಲ್‍ಡಿ ನೀರು ತರಬಹುದು. ಆದರೂ ನೀರಿನ ಸಮಸ್ಯೆ ಬಗೆಹರಿಯುವುದಿಲ್ಲ. ಪ್ರಸ್ತುತ ಕಾವೇರಿ ಮೊದಲ ಹಾಗೂ ಎರಡನೇ ಹಂತದಿಂದಲೂ ನೀರಿನ ಪ್ರಮಾಣ ಇಳಿಕೆಯಾಗಿದೆ. ಹೀಗಾಗಿ ಇತರೆ ಮೂಲದಿಂದ ನೀರುತರುವ ಅನಿವಾರ್ಯತೆ ಇದೆ ಎಂದು ಸಮರ್ಥಿಸಿಕೊಂಡರು.

    ಈ ಹಿಂದೆ ತ್ಯಾಗರಾಜ್ ಸಮಿತಿಯು ಲಿಂಗನಮಕ್ಕಿಯಿಂದಲೂ ನೀರು ಹರಿಸಬಹುದು ಎಂದು ವರದಿ ನೀಡಿದ್ದರು. ಈ ವರದಿಯನ್ನು ಅಧ್ಯಯನ ನಡೆಸಿ ನೀರುತರುವ ಸಾಧ್ಯತೆಯನ್ನು ಕಂಡುಕೊಳ್ಳಲಾಗಿದೆ. ಹೀಗಾಗಿ ಡಿಪಿಆರ್ ಮಾಡಲು ಸೂಚಿಸಲಾಗಿದೆ. ಡಿಪಿಆರ್ ಬಳಿಕ ಯೋಜನೆಯ ಸಾಧಕ ಬಾದಕವನ್ನು ಪರಿಶೀಲಿಸಲಾಗುವುದು. ಪರಿಸರ, ನೀರು ಪಂಪ್ ಮಾಡಲುಇರುವ ಸವಾಲುಗಳ ಬಗ್ಗೆ ಅವಲೋಕಿಸ ಲಾಗುವುದು ಎಂದರು.

    ಲಿಂಗನಮಕ್ಕಿಯು ಬೆಂಗಳೂರಿಗೆ 300 ಕಿ.ಮೀ. ದೂರವಿದೆ. 12 ಸಾವಿರಕೋಟಿರು.ವೆಚ್ಚ ಆಗಬಹುದು ಎಂದು ಅಂದಾಜಿಸಲಾಗಿದೆ .ಆದರೆ ವೆಚ್ಚದ ಬಗ್ಗೆ ಇನ್ನೂ ಸ್ಪಷ್ಟತೆಇಲ್ಲ. ಮೊದಲ ಹಂತದಲ್ಲಿ 10 ಟಿಎಂಸಿ ನೀರನ್ನು ತರಲು ಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕೇವಲ ವಿದ್ಯುತ್‍ ಉತ್ಪಾದನೆಗಷ್ಟೇ ಬಳಕೆಯಾಗುತ್ತಿರುವ ಲಿಂಗನಮಕ್ಕಿ:

      ಲಿಂಗನಮಕ್ಕಿ ಕೇವಲ ವಿದ್ಯುತ್‍ಉತ್ಪಾದನೆಗಷ್ಟೇ ಬಳಕೆಯಾಗುತ್ತಿದೆ. ಬಳಿಕ ಈ ನೀರು ಸಮುದ್ರದ ಪಾಲಾಗುತ್ತಿದೆ. ಈ ಜಲಾಶಯ ದಿಂದಯಾವುದೇ ನೀರಾವರಿ ಯೋಜನೆ ಕೈಗೊಂಡಿಲ್ಲ. ಹೀಗಾಗಿ ಈ ಮೂಲದಿಂದ ನೀರು ತರುವುದರಿಂದ ಯಾವುದೇ ರೈತರಿಗೂ ಸಮಸ್ಯೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು . ಎತ್ತಿನಹೊಳೆ ಯೋಜನೆ ಮೂಲಕ 2.5 ಟಿಎಂಸಿ ನೀರು ತರಲಾಗುತ್ತದೆ. ಇಷ್ಟು ಬೆಂಗಳೂರಿಗೆ ಸಾಲದು. ಹೀಗಾಗಿ ಲಿಂಗನಮಕ್ಕಿಯಿಂದಲೂ ನೀರು ತರಲು ಯೋಜಿಸಲಾಗಿದೆ ಎಂದು ಪರಮೇಶ್ವರ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap