ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಂಕುಸ್ಥಾಪನೆ ಮಾಡಿದ ಶಾಸಕ …!!

ಮಧುಗಿರಿ:

         ಗ್ರಾಮೀಣ ಜನರ ಆರೋಗ್ಯಕ್ಕಾಗಿ ಸರ್ಕಾರ ಎಲ್ಲಾ ರೀತಿಯ ನೆರವನ್ನು ನೀಡಲು ಬದ್ಧವಾಗಿದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಆಂಧ್ರ್ರ ಗಡಿಯಲ್ಲಿರುವ ಮುದ್ದೇನಹಳ್ಳಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ 1.74 ಕೋಟಿ ರೂ. ವೆಚ್ಚದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

         ಇದೊಂದು ಗಡಿಭಾಗದ ಪ್ರದೇಶ ವಾಗಿದೆ. ಸುಸಜ್ಜಿತವಾದ ಆಸ್ಪತ್ರೆ ನಿರ್ಮಾಣದಿಂದ ಈ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆಗಳು ಹಾಗೂ ಪ್ರಾಥಮಿಕ ಚಿಕಿತ್ಸೆ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಗಳು ದೊರೆಯಲಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯರು ಬಡವರ ಸೇವೆಗೆ ಮುಂದಾಗಬೇಕು. ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯವನ್ನು ಬದಗಿಸಲು ನಾನು ಸಿದ್ಧನಿದ್ದೇನೆ. ಮುಂದಿನ ದಿನಗಳಲ್ಲಿ ಈ ಹೋಬಳಿಯಲ್ಲೂ ಮೇವು ಬ್ಯಾಂಕ್ ಆರಂಭವಾಗಲಿದೆ ಎಂದರು.

         ಜಿ.ಪಂ.ಸದಸ್ಯೆ ಮಂಜುಳಾ ಆದಿನಾರಾಯಣರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ರಮೇಶ್‍ಬಾಬು, ತಾ.ಪಂ.ಸದಸ್ಯ ಮಲ್ಲಿಕಾರ್ಜುನ್, ಮುದ್ದೇನಹಳ್ಳಿ ಗ್ರಾ.ಪಂ.ಅಧ್ಯಕ್ಷೆ ನಾರಾಯಣಮ್ಮ, ಪಿಡಿಓ ಮಧುಕರ್, ಗುತ್ತಿಗೆದಾರ ಶ್ರೀನಿವಾಸ್, ಮುಖಂಡರಾದ ಗುಂಡಗಲ್ಲು ಜಯರಾಂ ಹಾಗೂ ಇತರರು ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link