ದಾವಣಗೆರೆ:
ತಾಲೂಕಿನ ಎಲೆ ಬೇತೂರು ಗ್ರಾಮದ ಕೊಂಡಜ್ಜಿ ಬಸಪ್ಪ ಪ್ರೌಢ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ 2018-19ನೇ ಶೈಕ್ಷಣಿಕ ವರ್ಷದ ಉಚಿತ ಸೈಕಲ್ಗಳನ್ನು ಜಿ.ಪಂ. ಸದಸ್ಯೆ ರೇಣುಕಮ್ಮ ಕರಿಬಸಪ್ಪ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ತಾ.ಪಂ. ಸದಸ್ಯ ಬಿ.ಜಿ.ಸಂಗನಗೌಡ್ರು ಮಾತನಾಡಿ, ವಿದ್ಯಾರ್ಥಿಗಳು ಸೈಕಲ್ಗಳನ್ನು ಶಾಲೆಗೆ ಬರಲು ಹೋಗಲು ಮಾತ್ರ ಉಪಯೋಗಿಸಬೇಕು. ಯಾವುದೇ ಕಾರಣಕ್ಕೂ ಮನೆ ಕೆಲಸಗಳಿಗೆ ಉಪಯೋಗಿಸಬಾರದು ಎಂದು ಕಿವಿಮಾತು ಹೇಳಿದರು.
ಶಾಲೆಯ ಅಧ್ಯಕ್ಷ ಎಂ.ಬಸವರಾಜಪ್ಪ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಲಾ ಸ್ಥಳೀಯ ಸಮಿತಿಯ ಸದಸ್ಯರಾದ ಪತ್ರಿ ಬಸಪ್ಪ, ಮರುಳಸಿದ್ದಪ್ಪ, ಚೇತನ್ಕುಮಾರ್, ಕಾರ್ಯದರ್ಶಿ ಬಿ.ವಿರೂಪಾಕ್ಷಪ್ಪ, ಪತ್ರಕರ್ತ ಎಂ.ಷಡಾಕ್ಷರಪ್ಪ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಎಸ್.ಕೆ.ಹಲಗಣ್ಣ ಸ್ವಾಗತಿಸಿದರು. ಶಿಕ್ಷಕ ಬಸವರಾಜಪ್ಪ ನಿರೂಪಿಸಿ, ವಂದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/09/elebethuru-1.gif)