ದಾವಣಗೆರೆ:
ತಾಲೂಕಿನ ಆವರಗೊಳ್ಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಶಾಲೆಯ 8ನೇತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆಮಾಡಲಾಯಿತು. ಈ ವೇಳೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಬಸವರಾಜಪ್ಪ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಜಿ.ಟಿ.ವೀರಣ್ಣ, ಗ್ರಾ.ಪಂ.ಸದಸ್ಯ ರೇವಣ್ಣಸಿದ್ದಪ್ಪ, ಎಸ್.ಡಿ.ಎಂ.ಸಿ.ಅಧ್ಯಕ್ಷ ನಾಗರಾಜ್, ಗ್ರಾಮಸ್ಥರಾದ ಖಲೀಲ್ ಸಾಬ್, ದಳಪತಿ ವೀರಯ್ಯ, ಷಣ್ಮುಖಪ್ಪ, ಕೆ.ಎಂ.ವೀರಯ್ಯಸ್ವಾಮಿ, ಶಾಲೆಯ ಹಳೆಯ ವಿಧ್ಯಾರ್ಥಿಗಳಾದ ಶರಣಪ್ಪ, ಚೇತನ್ ಬಣಕಾರ್, ಶಾಲೆಯ ಸಹಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
