ಚಿತ್ರದುರ್ಗ:
ಗಾಂಧಿಜಯಂತಿಯಂದು ಮಂಗಳವಾರ ರಾಷ್ಟ್ರಪಿತ ಮಹಾತ್ಮಗಾಂಧಿರವರ 150 ನೇ ಜಯಂತಿಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಸಂಸದ ಬಿ.ಎನ್.ಚಂದ್ರಪ್ಪ ಗಾಂಧಿಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡುತ್ತ ಸತ್ಯ ಮತ್ತು ಅಹಿಂಸೆಯನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಬ್ರಿಟೀಷರ ವಿರುದ್ದ ಹೋರಾಡಿ ದೇಶಕ್ಕೆ ಸ್ವಾತಂತ್ರ ತಂದು ಕೊಟ್ಟ ರಾಷ್ಟ್ರಪಿತ ಮಹಾತ್ಮಗಾಂಧಿಜಿರವರ ಆದರ್ಶ ಮೌಲ್ಯಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗಾಂಧಿ ಕಂಡ ಕನಸು ರಾಮರಾಜ್ಯವಾಗಲಿದೆ ಎಂದು ಹೇಳಿದರು.
ಕೆ.ಪಿ.ಸಿ.ಸಿ.ಕಾರ್ಯದರ್ಶಿ ಗೋವಿಂದಸ್ವಾಮಿ ಮಾತನಾಡಿ ದೇಶಕ್ಕೆ ಸ್ವಾತಂತ್ರ ತಂದುಕೊಟ್ಟ ಮಹಾತ್ಮಗಾಂಧಿರವರ 150 ನೇ ಜಯಂತಿ ಹಾಗೂ ಲಾಲ್ಬಹದ್ದೂರ್ಶಾಸ್ತ್ರೀರವರ 114 ನೇ ಜನ್ಮದಿನಾಚರಣೆಯನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಹಿರಿಯರು ನಡೆದ ಬಂದ ಹಾದಿಯಲ್ಲಿ ಪ್ರತಿಯೊಬ್ಬರು ಸಾಗಬೇಕಿದೆ ಎಂದರು.
ಬ್ರಿಟೀಷರ ವಿರುದ್ದ ಹೋರಾಡಿ ದೇಶಕ್ಕೆ ಸ್ವಾತಂತ್ರ ತಂದು ಕೊಟ್ಟು ಗಾಂಧಿ ಮಹಾತ್ಮನಾಗಿ ಎಲ್ಲರ ಮನದಲ್ಲಿ ಉಳಿದಿದ್ದಾರೆ. ಅದೇ ರೀತಿ ಲಾಲ್ಬಹದ್ದೂರ್ಶಾಸ್ತ್ರಿ ಜೈಜವಾನ್ ಜೈಕಿಸಾನ್ ಎನ್ನುವ ಯೋಜನೆಯ ಮೂಲಕ ಅನ್ನದಾತ ರೈತನ ಪರವಾಗಿ ಹೋರಾಡಿದರು ಎಂದು ಗುಣಗಾನ ಮಾಡಿದರು.
ಲೋಕ ಸಂಪರ್ಕ ಅಭಿಯಾನವನ್ನು ಆದಷ್ಟು ಬೇಗನೆ ಆರಂಭಿಸಲಾಗುವುದು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಅನೇಕ ಜನಪರ ಯೋಜನೆಗಳು ಹಾಗೂ ಈಗಿನ ಕೇಂದ್ರ ಬಿಜೆಪಿ.ಸರ್ಕಾರದ ದುರಾಡಳಿತವನ್ನು ಪ್ರತಿ ಮನೆ ಮನೆಗೆ ತಿಳಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಹಾಗೂ ಮುಖಂಡರುಗಳು ಈಗಿನಿಂದಲೇ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.
ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಮಾತನಾಡಿ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗೂ ಲಾಲ್ಬಹದ್ದೂರ್ಶಾಸ್ತ್ರಿರವರಲ್ಲಿದ್ದ ದೇಶಭಕ್ತಿ ರಾಷ್ಟ್ರಪ್ರೇಮವನ್ನು ಎಲ್ಲರೂ ಮೈಗೂಡಿಸಿಕೊಂಡಾಗ ಮಾತ್ರ ನಿಜವಾಗಿಯೂ ದೇಶಕ್ಕಾಗಿ ಹೋರಾಡಿ ಮಡಿದ ಹಿರಿಯರಿಗೆ ಗೌರವ ನೀಡಿದಂತಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್, ಮಾಜಿ ಅಧ್ಯಕ್ಷ ಎಂ.ಎ.ಸೇತೂರಾಂ, ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್ಕುಮಾರ್, ಬಿ.ಜಿ.ಶ್ರೀನಿವಾಸ್, ಆರ್.ಕೆ.ನಾಯ್ಡು, ಮಾಜಿ ಸಚಿವ ಕೆ.ಶಿವಮೂರ್ತಿನಾಯ್ಕ, ಜಿಲ್ಲಾ ವಕ್ತಾರ ಆರ್.ಶೇಷಣ್ಣಕುಮಾರ್, ಮಹಡಿಶಿವಮೂರ್ತಿ, ಕಾಂಗ್ರೆಸ್ ಉಪಾಧ್ಯಕ್ಷೆ ನಜ್ಮತಾಜ್, ಮೋಕ್ಷರುದ್ರಸ್ವಾಮಿ, ಮುನಿರಾ ಎ.ಮಕಾಂದಾರ್, ಮೆಹಬೂಬ್ಖಾತೂನ್, ಸೇವಾದಳದ ಅಶ್ರಫ್ಆಲಿ, ತಿಪ್ಪೇಸ್ವಾಮಿ, ನ್ಯಾಯವಾದಿ ರವಿ, ಡಿ.ಎಸ್.ಸೈಯದ್ವಲಿಖಾದ್ರಿ ಇನ್ನು ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು..
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
