ಬೆಂಗಳೂರು:
ಧಾರವಾಡ ಕಟ್ಟಡ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಕನಿಷ್ಟ 10ಲಕ್ಷರೂ. ಪರಿಹಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ದುರದೃಷ್ಟಕರ ಕಾರ್ಯಾಚರಣೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಮೊದಲು ಅವಶೇಷಗಳಡಿ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತರಬೇಕು.
ಮೃತಪಟ್ಟವರ ಕುಟುಂಬಕ್ಕೆ 10ಲಕ್ಷ ರೂ. ಪರಿಹಾರ ನೀಡಬೇಕು ಎಂದು ಅವರು ಹೇಳಿದರು. ಅಕ್ರಮ ಕಟ್ಟಡಗಳಿಗೆ ಸಿಸಿ ಕೊಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕಟ್ಟಡ ಮಾಲೀಕರು ಮತ್ತು ಇಂಜಿನಿಯರ್ ಗಳು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಬೇಜವಾಬ್ದಾರಿಯತದಿಂದ ಅಮಾಯಕರು ಸಾವನ್ನಪ್ಪಿದ್ದಾರೆ. ಇದರಲ್ಲಿ ರಾಜಕೀಯ ಬೆರೆಸುವುದು ಬೇಡ ಕನಿಷ್ಟ ಮೃತಪಟ್ಟ ಕುಟುಂಬಗಳಿಗೆ ಗರಿಷ್ಟ ಮಟ್ಟದ ಪರಿಹಾರವನ್ನುಸರ್ಕಾರ ನೀಡಲಿ ಎಂದು ಅವರು ಹೇಳಿದರು.ಅಗ್ನಿಶಾಮಕ ದಳ ಸ್ಥಳೀಯ ಪೊಲೀಸರು ನಿರಂತರವಾಗಿ ಕಾರ್ಯಚರಣೆ ನಡೆಸಿ ಸಾಕಷ್ಟು ಜನರನ್ನು ರಕ್ಷಿಸಿದ್ದಾರೆ ಅವರ ಕಾರ್ಯ ಶ್ಲಾಘನೀಯವಾಗಿದೆ . ಸ್ಥಳೀಯ ಜಿಲ್ಲಾಡಳಿತ ಮತ್ತು ಸ್ಥಳೀಯರು ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಶೆಟ್ಟರ್ ಹೇಳಿದರು.
ಹುಬ್ಬಳ್ಳಿ-ಧಾರವಾಡದಲ್ಲಿ ರುವ ಅಕ್ರಮ ಕಟ್ಟಡಗಳ ಬಗ್ಗೆ ಮಹಾನಗರಪಾಲಿಕೆ ಸೂಕ್ತ ಕ್ರಮ ಕೈಗೊಂಡರೆ ಇಂತಹ ಅವಘಡಗಳು ಸಂಭವಿಸುವುದಿಲ್ಲ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
