ವೋಟಿನ ಜೊತೆಗೆ ಖರ್ಚಿಗೆ ನೋಟು ಕೊಡಿ

ದಾವಣಗೆರೆ:

         ಪಕ್ಷೇತರ ಅಭ್ಯರ್ಥಿಯಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಎಂ.ಬಿ.ವೀರಭದ್ರಪ್ಪನವರು ಮತದಾರರು ಚುನಾವಣಾ ಖರ್ಚಿಗಾಗಿ ವೋಟಿನ ಜೊತೆಗೆ ನೋಟು ನೀಡಬೇಕೆಂದು ಮನವಿ ಮಾಡಿದ್ದಾರೆ.

          ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಸ್ಪರ್ಧಿಸುತ್ತಿರುವ ತಮ್ಮನ್ನು ತನು-ಮನ-ಧನದೊಂದಿಗೆ ಬೆಂಬಲಿಸಬೇಕೆಂದು ಮನವಿ ಮಾಡಿದರು.

         ನನಗೆ ಸ್ವಂತ ಜಮೀನು ಅಥವಾ ಮನೆಯಾಗಲೀ ಇಲ್ಲ. ಬಡವನಾದರೂ ಘಟಾನುಘಟಿಗಳ ಎದುರು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಸಂಸದನಾಗಿ ಆಯ್ಕೆಯಾದಲ್ಲಿ ಸೂಳೆಕೆರೆ ಒತ್ತುವರಿ ತೆರವು, ಕೆರೆಯ ಹೂಳು ತೆಗೆಸುವುದು ಸೇರಿದಂತೆ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆಂದು ಭರವಸೆ ನೀಡಿದರು.

        ತಾವು ನಾಳೆ (ಏ.3ರಂದು) ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತಿದ್ದು, ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದರು.ಸುದ್ದಿಗೋಷ್ಠಿಯಲ್ಲಿ ಬೆಂಬಲಿಗರಾದ ಎಂ.ಮಹೇಶ್ವರಪ್ಪ ಅಜ್ಜಿಹಳ್ಳಿ ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link