ಚಿತ್ರದುರ್ಗ
ಮರು ಪರೀಕ್ಷೆಯನ್ನು ಆರನೆ ಸೆಮಿಸ್ಟರ್ನಲ್ಲಿಯೇ ಬರೆಯಲು ಅವಕಾಶ ನೀಡುವಂತೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಸ್ಟೇಡಿಯಂ ರಸ್ತೆಯಿಂದ ಮೆರವಣಿಗೆ ಮೂಲಕ ಆಗಮಿಸಿದ ಸರ್ಕಾರಿ ಕಲಾ ಕಾಲೇಜು ಹಾಗೂ ವಿಜ್ಞಾನ ಕಾಲೇಜಿನ ಒಂದುವರೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆಯನ್ನು ಆಲಿಸುವಂತೆ ಪಟ್ಟು ಹಿಡಿದು ನಂತರ ಡಿಸಿ ಕಚೇರಿಗೆ ತೆರಳಿದ ವಿದ್ಯಾರ್ಥಿಗಳು ಬಾಕಿ ಉಳಿಸಿಕೊಂಡಿರುವ ವಿಷಯಗಳನ್ನು ಆರನೇ ಸೆಮಿಸ್ಟರ್ನಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಇಲ್ಲವಾದಲ್ಲಿ ಒಂದು ವರ್ಷಗಳ ವ್ಯರ್ಥವಾಗುತ್ತದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮರು ಪರೀಕ್ಷೆಯನ್ನು ಆರನೇ ಸೆಮ್ನಲ್ಲಿಯೆ ಬರೆಯಲು ಅವಕಾಶ ಒದಗಿಸಿಕೊಡಬೇಕು ಎಂದು ಜಿಲ್ಲಾಡಳಿತದ ಮೂಲಕ ವಿಶ್ವವಿದ್ಯಾನಿಲಯಕ್ಕೆ ಮನವಿ ಮಾಡಿದರು.ಎ.ಬಿ.ವಿ.ಪಿ.ನಗರ ಕಾರ್ಯದರ್ಶಿ ಸತೀಶ್ ಭಗತ್, ಗುರು, ನಿಶ, ಸ್ಪೂರ್ತಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
