ಮಾಧ್ಯಮ ಮತ್ತು ಶಾಸಕರಿಗೆ ಕೂಡಲೆ ಬಜೆಟ್ ಪ್ರತಿ ಕೊಡಬೇಕು: ಬಿ ಎಸ್ ವೈ

ಬೆಂಗಳೂರು

            ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ಬಹುಮತ ಇಲ್ಲ ಎಂಬುದು ಬುಧವಾರದ ವಿಧಾನಸಭೆಯ ಕಲಾಪಗಳ ನಡವಳಿಕೆಯಿಂದಲೇ ಬಹಿರಂಗವಾಗಿದೆ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

           ವಿಧಾನಸಭೆಯ ಮೊಗಸಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರೆ ಕುಮಾರಸ್ವಾಮಿ ನಮ್ಮ ಮುಖ್ಯಮಂತ್ರಿ ಅಲ್ಲ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಈ ಹುದ್ದೆಯಲ್ಲಿ ಮುಂದುವರಿಯುವುದು ಎಷ್ಟರ ಮಟ್ಟಿಗೆ ನೈತಿಕವಾಗಿ ಸರಿ ಎಂದು ಪ್ರಶ್ನೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಬಜೆಟ್ ಭಾಷಣ ಓದಿದ ಮೇಲೆ ಸದಸ್ಯರಿಗೆ ಪ್ರತಿಗಳನ್ನು ನೀಡುವಂತಹ ತೀರ್ಮಾನ ತೆಗೆದುಕೊಳ್ಳುವುದು ಸರಿಯಲ್ಲ. ಮಾಧ್ಯಮದವರಿಗೆ ಮತ್ತು ಸದಸ್ಯರಿಗೆ ಕೂಡಲೇ ಬಜೆಟ್ ಪ್ರತಿಗಳನ್ನು ಕೊಟ್ಟು ಹಿಂದಿನ ಸಂಪ್ರದಾಯವನ್ನು ಎತ್ತಿ ಹಿಡಿಯಬೇಕೆಂದು ಯಡಿಯೂರಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap