ದಾವಣಗೆರೆ:
ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.5 ಮತ್ತು 6ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಏರ್ಪಡಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಸ್.ಹಾಲೇಶಪ್ಪ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.5ರಂದು ಬೆಳಗ್ಗೆ 11 ಗಂಟೆಗೆ ಶಾಸಕ ಎಸ್.ಎ.ರವೀಂದ್ರನಾಥ್ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ.ಪಂ ಸಿಇಓ ಎಸ್.ಅಶ್ವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್.ಆರ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಡಿ.6ರಂದು ಕುವೆಂಪು ಕನ್ನಡ ಭವನದಲ್ಲಿ ಸಂಗೀತ, ನೃತ್ಯ, ವಾದ್ಯ ಸಂಗೀತ, ಕಿರು ನಾಟಕ ಸ್ಪರ್ಧೆಗಳು ನಡೆಯಲಿವೆ. ಜಿಲ್ಲಾ ಮಟ್ಟದಲ್ಲಿ ವಿಜೇತರಾದವರಿಗೆ ಜನವರಿ 2019ರಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಕಳುಹಿಸಲಾಗುವುದು. ಹಾಗೂ ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಓಓಡಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
45 ವರ್ಷ ಮೇಲ್ಪಟ್ಟ ಹಾಗೂ ಒಳಗಿನ ಪುರುಷ ಹಾಗೂ ಮಹಿಳೆಯರಿಗೆ ಉದ್ದ ಜಿಗಿತ, ಎತ್ತರ ಜಿಗಿತ, ಜಂಪ್, ಗುಂಡು ಎಸೆತ, ಚಕ್ರ ಎಸೆತ ಸೇರಿದಂತೆ ಮೊದಲಾದ ಸ್ಪರ್ಧೆಗಳು ನಡೆಯಲಿವೆ. ಗುಂಪು ಆಟಗಳು ಸಹ ನಡೆಯಲಿವೆ. ಕುಸ್ತಿ, ವ್ಹೆಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್, ದೇಹದಾಢ್ರ್ಯ ಸ್ಪಧೆಗಳು ನಡೆಯಲಿವೆ.
ಆಸಕ್ತಿಯುಳ್ಳ ನೌಕರರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಡಿ. 1ರೊಳಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು.ಸುದ್ದಿಗೋಷ್ಠಿಯಲ್ಲಿ ಸಿ.ಪರಶುರಾಮಪ್ಪ, ಬಿ.ಆರ್.ತಿಪ್ಪೇಸ್ವಾಮಿ, ಬಿ.ಮಂಜುನಾಥ್, ಧನಂಜಯ, ಕೃಷ್ಣಪ್ಪ, ನಿರಂಜನ್ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ