ಬೆಂಗಳೂರು
ಬಜೆಟ್ ಮಂಡನೆಗೂ ಮುನ್ನವೇ ನಾಡಿನ ಅನ್ನದಾತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ ಕೃಷಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ಯಡಿಯೂರಪ್ಪ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ
ರಾಜ್ಯದ ಸಹಕಾರ ಸಂಸ್ಥೆಗಳ ಮೂಲಕ ಪಡೆದ ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಬಡ್ಡಿಯನ್ನು ಮನ್ನಾ ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಜನವರಿ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಮೇಲಿನ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಿದೆ. ಅತಿವೃಷ್ಟಿ ಮತ್ತು ಅನಾವೃಷ್ಟಿ ಹಿನ್ನೆಲೆಯಲ್ಲಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸರ್ಕಾರ ಸುಸ್ತಿ ಸಾಲದ ಬಡ್ಡಿಯನ್ನು ಮನ್ನಾ ಮಾಡಿದೆ.
ರಾಜ್ಯದ ಸಹಕಾರ ಸಂಸ್ಥೆಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕ್ ಗಳು, ಲ್ಯಾಂಪ್ಸ್ ಸೊಸೈಟಿಗಳು ಮತ್ತು ಪಿಕಾರ್ಡ್ ಬ್ಯಾಂಕ್ ಗಳಿಂದ ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಆಗಲಿದೆ.ಜನವರಿ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಹಾಗೂ ಕೃಷಿ ಸಂಬಂಧಿತ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಸರ್ಕಾರ ತಿಳಿಸಿದೆ.
ರೈತರು ಸಾಲ ಮರುಪಾತಿಸಲು ರಾಜ್ಯ ಸರ್ಕಾರ ಇದೇ ಮಾರ್ಚ್ 31 ಗಡುವು ನೀಡಿದ್ದು, ಅಷ್ಟರೊಳಗೆ ರೈತರು ಸಾಲ ಕಟ್ಟಿದ್ರೆ, ಆ ಸಾಲದ ಮೇಲಿನ ಬಡ್ಡಿ ಕಟ್ಟುವಂತಿಲ್ಲ. ಅಂದಾಜು 92525 ರೈತರ ಸುಸ್ತಿ ಸಾಲ, 56011.03 ಲಕ್ಷ ರೂ. ಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ಇದ್ದು, 46614.67 ಲಕ್ಷ ರೂ. ಬಡ್ಡಿ ಮನ್ನಾ ಆಗಲಿದೆ.
ಈವರೆಗೂ ಸಹಕಾರ ಬ್ಯಾಂಕ್?ಗಳಿಗೆ 92,525 ರೈತರ ಅಂದಾಜು 56011.03 ಲಕ್ಷ ರೂ.ಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ಸುಸ್ತಿಯಾಗಿದೆ. ಇದರ ಮೇಲಿನ ಬಡ್ಡಿ ಬಾಬ್ತು ಅಂದಾಜು 46614.67 ಲಕ್ಷ ರೂ. ಆಗಿದ್ದು, ಈ ಹಣವನ್ನು ಸರ್ಕಾರ ಮನ್ನಾ ಮಾಡಿದೆ. ಆದರೆ, ಮಾರ್ಚ್ 31ರೊಳಗೆ ರೈತರು ಅಸಲು ಮರು ಪಾವತಿಸಿದಲ್ಲಿ ಬಡ್ಡಿ ಮನ್ನಾ ಆಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/12/bs_yeddyurappa__1564162176-e1584095220762.gif)