ಗುಬ್ಬಿ
ತಾಲ್ಲೂಕಿನ ಚೇಳೂರು ಹೋಬಳಿ ಗೌರಿಪುರ ಗ್ರಾಮದ ಧಾರ್ಮಿಕ ಪ್ರಸಿದ್ದ ಶ್ರೀ ಆಂಜನೇಯಸ್ವಾಮಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಬ್ರಹ್ಮರಥೋತ್ಸವ ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು.
ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ವೈಭವಯುತವಾಗಿ ನಡೆದವು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತಾದಿಗಳು ರಥೋತ್ಸವಕ್ಕೆ ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.
ವಾರ್ಷಿಕ ಜಾತ್ರಾ ಮಹೋತ್ವಸದ ಅಂಗವಾಗಿ ಪತ್ರಿ ನಿತ್ಯ ವಿವಿಧ ಪೂಜೆ ಮತ್ತು ದೇವರಿಗೆ ಅಲಂಕಾರಗಳನ್ನು ಮಾಡಲಾಗಿತ್ತು. ಭಾಗವಹಿಸಿದ್ದ ಭಕ್ತಾದಿಗಳು ತಮ್ಮ ಇಷ್ಟಾರ್ಥ ಪೂಜೆ ಸಲ್ಲಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು. ಮಾ31 ರಂದು ಶಯನೋತ್ಸವ, ಸುಲಿಗೆ ಸೇವೆ ಮತ್ತು ಬೆಳ್ಳಿ ರಥ ಉತ್ಸವ ನಡೆಯಲಿದ್ದು ಏ1.ರಂದು ವಸಂತೋತ್ಸವ ಮತ್ತು ಕಂಕಣ ವಿಸರ್ಜನೆ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆಯಲಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
