ತುರುವೇಕೆರೆ
ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಭಾನುವಾರ ಗ್ರಾಮ ಗಸ್ತು ಸಮಿತಿ ಸದಸ್ಯರ ಸಭೆಯನ್ನು ಆಯೋಜಿಸಲಾಗಿತ್ತು.
ಸಿಪಿಐ ಮಹಮದ್ ಸಲೀಂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಲಚ್ಚಿಬಾಬು, ಪೊಲೀಸ್ ಸಿಬ್ಬಂದಿಗಳಾದ ಜಗನ್ನಾಥ್, ರಾಮಚಂದ್ರು, ಚಂದ್ರಶೇಖರ್, ಶಿವಲಿಂಗಪ್ಪ ನಾಗರೀಕರಾದ ನವೀನ್ ಬಾಬು, ಅಸ್ಲಾಮ್ಪಾಷಾ, ಜಗದೀಶ್, ಕೃಷ್ಣಮೂರ್ತಿ, ಚಂದ್ರಶೇಖರ್ ಸೇರಿದಂತೆ ಪಟ್ಟಣದ ಹಾಗೂ ಸುತ್ತಮುತ್ತ ಗ್ರಾಮದ ಸಾರ್ವಜನಿಕರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
