ಸರ್ಕಾರದ ಮೇಲೆ ವಾಕ್ ಪ್ರಹಾರ ನಡೆಸಿದ ಹೆಚ್ ಡಿ ರೆವಣ್ಣ

ಬೆಂಗಳೂರು

     ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ಕಾಮಗಾರಿಗಳಿಗೆ ತಡೆ ಒಡ್ಡಿ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಈಗಿನ ಸರ್ಕಾರ ಹಣ ಮಂಜೂರು ಮಾಡುತ್ತಿದೆ ಎಂದು ಜೆಡಿಎಸ್‍ನ ಹೆಚ್.ಡಿ.ರೇವಣ್ಣ ವಿಧಾನಸಭೆಯಲ್ಲಿಂದು ಆಕ್ರೋಶ ವ್ಯಕ್ತಪಡಿಸಿದರು.

    ಶೂನ್ಯ ವೇಳೆಯಲ್ಲಿ ನಿಯಮ 60 ರಡಿ ವಿಷಯ ಪ್ರಸ್ತಾಪಿಸಲು ಯತ್ನಿಸಿದ ಅವರು,ಹಿಂದಿನ ಸರ್ಕಾರ ಲೋಕೋಪಯೋಗಿ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಮಂಜೂರು ಮಾಡಿದ್ದ ಕಾಮಗಾರಿಗಳಿಗೆ ಈಗಿನ ಸರ್ಕಾರ ತಡೆ ನೀಡಿದೆ ಎಂದರು.ಸರ್ಕಾರ ನೀಡಿದ ತಡೆಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಕ್ಷೇತ್ರಗಳಲ್ಲಿ ಎಲ್ಲ ಕಾಮಗಾರಿಗಳು ಸ್ಥಗಿತವಾಗಿವೆ.ಆದರೆ ಬಿಜೆಪಿ ಶಾಸಕರ ಕ್ಷೇತ್ರಗಳಲ್ಲಿ ಮಾತ್ರ ಕೆಲಸ ನಡೆಯುತ್ತಿದೆ ಎಂದು ಆರೋಪ ಮಾಡಿದರು.

    ಮುಖ್ಯಮಂತ್ರಿಗಳ ನಗರೋಥ್ಥಾನ ಯೋಜನೆ ಇರಬಹುದು.ಇನ್ಯಾವುದೇ ಕೆಲಸ ಇರಬಹುದು.ಎಲ್ಲವನ್ನೂ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಮಂಜೂರು ಮಾಡಲಾಗುತ್ತಿದೆ.ಇದು ಸರಿಯಲ್ಲ ಎಂದು ನುಡಿದರು.ಬೇಕಿದ್ದರೆ ಈ ಸದನದಲ್ಲಿ ಒಂದು ನಿರ್ಣಯ ಅಂಗೀಕರಿಸಿ.ಸರ್ಕಾರ ನಮ್ಮದು.ಹೀಗಾಗಿ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ ನೀಡುತ್ತೇವೆ ಎಂದು ಹೇಳಿ.ನಾವು ಸುಮ್ಮನಿದ್ದು ಬಿಡುತ್ತೇವೆ ಎಂದು ಹೇಳಿದರು.

    ಆದರೆ ಈ ಪ್ರಸ್ತಾಪವನ್ನು ನಿಯಮ 69 ಕ್ಕೆ ಪರಿವರ್ತಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಂತರ ಮಾತನಾಡಲು ಅವಕಾಶ ನೀಡುವುದಾಗಿ ನುಡಿದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link