ಮೆಟ್ರೋಗಾಗಿ ಸೂರು ಕಳೆದುಕೊಂಡ ಆಂಜನೇಯ ..!

ಬೆಂಗಳೂರು

    ಬೆಂಗಳೂರಿನ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದಲ್ಲಿ ನಮ್ಮ ಮೆಟ್ರೋ ಕಾಮಗಾರಿಗಾಗಿ ಗರ್ವೆಬಾವಿ ಪಾಳ್ಯದಲ್ಲಿರುವ ಆಂಜನೇಯ ದೇವಸ್ಥಾನವನ್ನು ನೆಲಸಮ ಮಾಡಲಾಗಿದೆ. ಪವನ ಪುತ್ರ ಹನುಮಂತ ಭಕ್ತರಿಗೆ ದರ್ಶನ ನೀಡುತ್ತಾ ಶಾಂತವಾಗಿ ನೆಲೆಸಿದ್ದನು. ಭಕ್ತರು ಕೂಡ 150 ವರ್ಷಗಳಿಂದ ಈ ಆಂಜನೇಯನನ್ನ ಆರಾಧಿಸಿಕೊಂಡು ಬರುತ್ತಿದ್ದಾರೆ. ಬೆಂಗಳೂರಿನ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದಲ್ಲಿ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿದೆ.

   ಗರ್ವೆಬಾವಿ ಪಾಳ್ಯ, ಬೊಮ್ಮನಹಳ್ಳಿ ಹಾಗೂ ರೂಪೇನ ಅಗ್ರಹಾರದಲ್ಲಿ ಮೂರು ಆಂಜನೇಯನ ಸನ್ನಿಧಿಗಳಿವೆ. ಈ ಮೂರು ಆಂಜನೇಯನ ಗುಡಿಯನ್ನ ಕೆಡವಲು ಬೆಂಗಳೂರು ಮೆಟ್ರೊ ರೈಲು ನಿಗಮ(ಬಿಎಂಆರ್‌ಸಿಎಲ್) ಯೋಜನೆ ರೂಪಿಸಿದೆ.ಗರ್ವೆಬಾವಿ ಪಾಳ್ಯದಲ್ಲಿರೋ ಆಂಜನೇಯನ ಗುಡಿ ಅತ್ಯಂತ ಪುರಾತನವಾಗಿದ್ದು, ಸರಿಸುಮಾರು 150 ವರ್ಷದಷ್ಟು ಹಳೆಯದು ಎನ್ನಲಾಗುತ್ತಿದೆ. ಅಲ್ಲದೆ ಈ ಹಿಂದೆ ಮೆಟ್ರೋ ಪ್ಲಾನ್ ಪ್ರಕಾರ ಗುಡಿ ತೆರವು ಮಾಡುವುದಿಲ್ಲ ಎಂದು ಮೆಟ್ರೋ ಅಭಯ ನೀಡಿತ್ತು. ಆದರೆ ಇದೀಗ ಏಕಾಏಕಿ ದೇವಸ್ಥಾನ ತೆರವುಗೊಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap