ಹರಿಹರ ನಗರದಲ್ಲೆಡೆ ಶಾಂತಿಯುತ ಮತದಾನ

ಹರಿಹರ:

     ಲೋಕಸಭೆ ಚುನಾವಣೆಗೆ ತಾಲ್ಲೂಕಿನಾದ್ಯಾಂತ ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶೇ 36.11% ರಷ್ಟು ಮತದಾನವಾಗಿದೆ.ಕ್ಷೇತ್ರದ ಶಾಸಕ ಎಸ್.ರಾಮಪ್ಪ ಸುಣ್ಣಗಾರ ಬೀದಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ಡಿಆರ್ ಆರ್ ಮೈದಾನ ಹಳ್ಳದಕೇರಿ ಸರ್ಕಾರಿ ಶಾಲೆಯಲ್ಲಿ ಮತವನ್ನು ಚಲಾಯಿಸಿದರು.

      ನಂತರ ಶಾಸಕ ಎಸ್.ರಾಮಪ್ಪ ಮಾತನಾಡಿ, ಈ ಭಾರಿ ಲೋಕಸಭಾ ಚುನಾವಣೆಗೆ ತಾಲ್ಲೂಕಿನಲ್ಲಿ 25 ಸಾವಿರಕ್ಕು ಹೆಚ್ಚು ಮತಗಳ ಅಂತರಗಳಿಂದ ಮೈತ್ರಿ ಅಭ್ಯರ್ಥಿ ಹೆಚ್.ಬಿ.ಮಂಜಪ್ಪರವರು ಗೆಲವನ್ನು ಸಾಧಿಸಲಿದ್ದಾರೆ ಎಂದು ಅಭಿಪ್ರಾಯ ತಿಳಿಸಿದರು.
ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ಮಾತನಾಡಿ ನಮ್ಮ ಜೆಡಿಎಸ್ ಪಕ್ಷದ ಬೆಂಬಲದಿಂದ ಮೈತ್ರಿ ಅಭ್ಯರ್ಥಿ ಮಂಜಪ್ಪ ಗೆಲವು ಸಾಧಿಸಲಿದ್ದಾರೆ ನಮ್ಮ ಬೆಂಬಲದಿಂದ ಅವರಿಗೆ ಆನೆ ಬಲ ಬಂದಂತಾಗಿದೆ ಎಂದರು.ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಿಗಿ ಬಂದೋಬಸ್ತನ್ನು ಏರ್ಪಡಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link