ಹಾವೇರಿ
ತಾಲೂಕು ಪಂಚಾಯತಿ ವತಿಯಿಂದ ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಬ್ಬಂದಿ ವರ್ಗದವರಿಗೆ ಮತ್ತು ಸಾರ್ವಜನಿಕರಿಗೆ ವಿವಿ ಪ್ಯಾಟ ಪ್ರಾತ್ಯಕ್ಷಿಕೆ ಮತ್ತು ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ಮತದಾನ ಅತ್ಯಂತ ಪವಿತ್ರ ಹಕ್ಕು, ಪ್ರಜಾಪಭುತ್ವದ ಬಲವರ್ದನೆಗಾಗಿ ಎಲ್ಲಾರು ಕಡ್ಡಾಯವಾಗಿ ಮತದಾನವನ್ನು ಮಾಡಬೇಕು ಹಾಗೂ ಮತದಾನದಲ್ಲಿ ಭಾಗವಹಿಸುವದು ಎಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಮುಂದುವರೆದು ಪ್ರಜ್ಞಾವಂತ ಮತದಾರರು ಪ್ರಜಾ ಪ್ರಭುತ್ವದ ಮೂಲಭೂತ ಹಕ್ಕಾದ ಮತದಾನದಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ದೇಶದ ಅಭಿವೃದ್ದಿಗೆ ಕೈಜೋಡಿಸಬೇಕಿದೆ ನಾವು ಮತದಾನ ಮಾಡುವುದಲ್ಲದೆ ನಮ್ಮ ಸುತ್ತಮುತ್ತಲಿನವರು ಮತದಾನ ಮಾಡಿದ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಮತದಾನದಿಂದ ದೂರ ಉಳಿದವರಿಗೆ ಮತದಾನದ ಮಹತ್ವಕುರಿತು, ತಿಳಿಹೇಳುವ ಮೂಲಕ ಮತದಾನ ಮಾಡುವಂತೆ ಪ್ರೇರೆಪಿಸಬೇಕು ಎಂದರು.
ತಾಲೂಕಾ ವ್ಯಾಪ್ತಿಯಲ್ಲಿ ಮತದಾನ ಶೇಕಡಾ ಪ್ರಮಾಣ ಹೆಚ್ಚಿಸುವಲ್ಲಿ ಕಾಳಜಿವಹಿಸಬೇಕಿದೆ ಎಂದರು. ತಾಲೂಕ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶ್ರೀಮತಿ ಪುಷ್ಪಲತಾ ಬಿದರಿ, ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ತಾಲೂಕ ಪಂಚಾಯತಿ ಸಿಬ್ಬಂದಿ ವರ್ಗದವರು, ಸೆಕ್ಟರ್ ಅಧಿಕಾರಿಗಳು, ಹಾಜರಿದ್ದರು.