ಎಚ್.ಡಿ.ದೇವೇಗೌಡರನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ: ಹೊನ್ನಗಿರಿಗೌಡ

ಗುಬ್ಬಿ

      ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ರೈತಪರ ಚಿಂತಕರು ಅಭಿವೃದ್ಧಿಯ ಹರಿಕಾರರು ಹಾಗೂ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೆಗೌಡರು ಸ್ಪರ್ಧಿಸುತ್ತಿರುವುದು ಅಭಿನಂದನಾರ್ಹವಾದುದಾಗಿದ್ದು, ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಅವರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಅತ್ಯಧಿಕ ಮತಗಳಿಂದ ಅವರನ್ನು ಗೆಲ್ಲಿಸಿ ಮತ್ತೊಮ್ಮೆ ದೆಹಲಿಯ ಗದ್ದುಗೆಗೆ ಕಳುಹಿಸಿಕೊಡಲು ಎಲ್ಲಾ ರೀತಿಯ ಪ್ರಯತ್ನ ಮಾಡುವುದಾಗಿ ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡ ತಿಳಿಸಿದರು.

     ಪಟ್ಟಣದ ಅವರ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಮತ್ತೊಮ್ಮೆ ದೆಹಲಿ ಗದ್ದುಗೆಗೆ ಕಳುಹಿಸಲು ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡುವುದಾಗಿ ತಿಳಿಸಿದರು.

      ರಾಜ್ಯದಲ್ಲಿ ಎರಡೂ ಪಕ್ಷಗಳು ಒಂದಾಗಿ ಸಮ್ಮಿಶ್ರ ಸರ್ಕಾರದ ಮೂಲಕ ಇಡೀ ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದರ ಜೊತೆಗೆ ಜನಸಾಮಾನ್ಯರಿಗೂ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಮಾಡಿದ್ದು ಇದೀಗ ಎರಡೂ ಪಕ್ಷಗಳು ಮೈತ್ರಿ ಸರ್ಕಾರದ ನಿರ್ಧಾರದಂತೆ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ಹುಟ್ಟು ಹೋರಾಟಗಾರರಾಗಿ, ರೈತರ ಪರವಾಗಿ ಕೆಲಸ ಮಾಡುವಂತಹ ಹೆಚ್.ಡಿ.ದೇವೆಗೌಡರು ನಮ್ಮ ಜಿಲ್ಲೆಗೆ ಬಂದಿರುವುದನ್ನು ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಎಲ್ಲಾ ಮುಖಂಡರು, ಕಾರ್ಯಕರ್ತರು ಸ್ವಾಗತಿಸಿದ್ದು ಮತ್ತೊಮ್ಮೆ ಅವರು ದೆಹಲಿಗೆ ತೆರಳಿ ರಾಜ್ಯದ ಹಾಗೂ ಜಿಲ್ಲೆಯ ಪರವಾಗಿ ಕೆಲಸ ಮಾಡುವುದು ನಮ್ಮೆಲ್ಲರ ಆಸೆಯಾಗಿದೆ.

      ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಅಂತಹ ಹಿರಿಯ ರಾಜಕಾರಣಿ ಅವಶ್ಯಕತೆ ಇದ್ದು, ಅವರಿಗೆ ನಮ್ಮೆಲ್ಲರ ಸಹಕಾರ ಸಹಮತವಿದ್ದು ಈ ಭಾರಿ ಹೆಚ್ಚು ಅಂತರದಲ್ಲಿ ಅವರನ್ನು ಗೆಲ್ಲಿಸಲಾಗುತ್ತದೆ. ಗುಬ್ಬಿ ತಾಲ್ಲೂಕಿನ ಮನೆಮನೆಗೆ ತೆರಳಿ ಅವರ ಪರವಾಗಿ ಪ್ರಚಾರ ಮಾಡಲು ನಮ್ಮ ಎಲ್ಲ ಕಾರ್ಯಕರ್ತರು ಆಗಮಿಸಿಲಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಉತ್ತಮ ಆಡಳಿತ ನೀಡುತ್ತಿದ್ದು ನಮ್ಮೆಲ್ಲ ರಾಜ್ಯ ಮುಖಂಡರುಗಳು ಸಹ ಅವರನ್ನು ಗೆಲ್ಲಿಸುವುದಕ್ಕೆ ಮುಂದಾಗಿದ್ದು ಜಿಲ್ಲೆಯ ಜನರು ಸಹ ಅವರನ್ನು ಗೆಲ್ಲಿಸಲು ಚಿಂತನೆ ನಡೆಸಿದ್ದಾರೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಮುಖಂಡರಾದ ಲಕ್ಷ್ಮೀನಾರಾಯಣ್, ಕೃಷ್ಣಪ್ಪ, ಯೋಗೀಶ್ ಮುಂತಾದವರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap